ಬಣವೆ ಬಳಿ ಆಟವಾಡುತ್ತಿದ್ದ ಬಾಲಕ ಬೆಂಕಿಗಾಹುತಿಯಾದ

Public TV
0 Min Read

ಧಾರವಾಡ: ಆಕಸ್ಮಿಕ ಬೆಂಕಿ ಅನಾಹುತಕ್ಕೆ ಬಾಲಕ ಬಲಿಯಾಗಿರುವ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲುಕಿನ ಕುರುವಿನಕೊಪ್ಪ ಗ್ರಾಮದಲ್ಲಿ ನಡೆದಿದೆ.

7 ವರ್ಷದ ಬಾಲಕ ಚಂದನ ಸಂಗೊಳ್ಳಿ ಮೃತ ದುರ್ದೈವಿ. ದ್ಯಾಮಣ್ಣ ಕೊಂಕಣ್ಣವರ ಅವರಿಗೆ ಸೇರಿದ ಬಣವೆಗೆ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ. ಈ ವೇಳೆ ಬಣವೆಯ ಬಳಿ ಆಟವಾಡುತ್ತಿದ್ದ ಬಾಲಕ ಚಂದನ ಸಂಗೊಳ್ಳಿ ಬೆಂಕಿಗೆ ಆಹುತಿಯಾಗಿದ್ದಾನೆ. ಬೆಂಕಿ ನಂದಿಸಲು ಅಗ್ನಿಶಾಮಕ ದಳ ಸಿಬ್ಬಂದಿ ಹರಸಾಹಸ ಪಟ್ಟಿದ್ದಾರೆ.

ಕಲಘಟಗಿ ಪೊಲೀಸರು ಬಣವೆಗೆ ಬೆಂಕಿ ಹೊತ್ತಿಕೊಂಡ ಬಗ್ಗೆ ಮಹಿತಿ ಕಲೆ ಹಾಕುತ್ತಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *