ನೀನ್ ನನ್ಗೆ ಬೇಕು ಮದ್ವೆ ಆಗೋಣ ಎಂದ – ನಿರಾಕರಿಸಿದ್ದಕ್ಕೆ ಯುವತಿ ಎದೆಗೆ ಚಾಕು ಇರಿದು, ಕತ್ತು ಸೀಳಿದ

Public TV
1 Min Read

– ಅಕ್ಕನ ಮೈದುನನಿಂದ್ಲೆ ಕೃತ್ಯ
– ಸಾವು, ಬದುಕಿನ ನಡುವೆ ಹೋರಾಡುತ್ತಿರುವ ಯುವತಿ

ಲಕ್ನೋ: ಮದುವೆ ಆಗಲು ನಿರಾಕರಿಸಿದ್ದಕ್ಕೆ ಯುವತಿಗೆ ಪಾಗಲ್ ಪ್ರೇಮಿಯೋರ್ವ ನಡುರಸ್ತೆಯಲ್ಲೇ ಎದೆಗೆ ಚಾಕು ಇರಿದು, ಕತ್ತು ಸೀಳಿ ಕೊಲೆಗೆ ಯತ್ನಿಸಿದ ಭಯಾನಕ ಘಟನೆ ಉತ್ತರ ಪ್ರದೇಶ ಘಾಜಿಯಾಬಾದ್‍ನಲ್ಲಿ ನಡೆದಿದೆ.

21 ವರ್ಷದ ಯುವತಿ ಅಕ್ಕನ ಮೈದುನ ಈ ಕೃತ್ಯವೆಸೆಗಿದ್ದಾನೆ. ಶುಕ್ರವಾರ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಆರೋಪಿಯನ್ನು ಬಾಘಪಟ್ ನಿವಾಸಿ ಸಚಿನ್ ಎಂದು ಗುರುತಿಸಲಾಗಿದೆ. ಈತ ಯುವತಿಯನ್ನು ತುಂಬಾ ಪ್ರೀತಿಸುತ್ತಿದ್ದನು. ಆದರೆ ಯುವತಿ ಸಚಿನ್ ಪ್ರೀತಿಯನ್ನು ಒಪ್ಪಿರಲಿಲ್ಲ. ಆದ್ದರಿಂದ ಸಚಿನ್ ಯಾವಾಗಲೂ ಯುವತಿಗೆ ಪ್ರೀತಿಸುವಂತೆ ಪೀಡಿಸುತ್ತಿದ್ದನು. ಹಲವು ಬಾರಿ ನಾವಿಬ್ಬರು ಮದುವೆ ಆಗೋಣ ಎಂದು ಕಾಡಿದ್ದನು.

ಶುಕ್ರವಾರ ಬೆಳಗ್ಗೆ ಕೂಡ ಸಚಿನ್ ಯುವತಿಯನ್ನು ನಡುರಸ್ತೆಯಲ್ಲಿ ಅಡ್ಡಗಟ್ಟಿ ಮದುವೆಗೆ ಒಪ್ಪಿಕೊಳ್ಳಲು ಪೀಡಿಸಿದ್ದನು. ಆದರೆ ಯುವತಿ ಸಚಿನ್ ಮಾತಿಗೆ ಒಪ್ಪಲಿಲ್ಲ. ಇದರಿಂದ ಸಿಟ್ಟಿಗೆದ್ದ ಆರೋಪಿ ಏಕಾಏಕಿ ಯುವತಿಗೆ ಮೇಲೆ ಚಾಕುವಿನಿಂದ ಹಲ್ಲೆ ಮಾಡಿದ್ದಾನೆ.

ಯುವತಿಯ ಎದೆಗೆ ಚಾಕು ಇರಿದು, ಆಕೆಯ ಕತ್ತನ್ನು ಸೀಳಿ ಕೊಲೆ ಮಾಡಲು ಮುಂದಾಗಿದ್ದಾನೆ. ಈ ವೇಳೆ ದಾರಿಹೋಕರೊಬ್ಬರು ಕೃತ್ಯವನ್ನು ಕಂಡು ತಕ್ಷಣ ಯುವತಿಯ ಸಹಾಯಕ್ಕೆ ಬಂದಿದ್ದು, ಆರೋಪಿಯಿಂದ ಯುವತಿಯನ್ನು ರಕ್ಷಿಸಿ ಆಸ್ಪತ್ರೆಗೆ ರವಾನಿಸಿದ್ದಾರೆ. ಅಲ್ಲದೆ ಯುವಕನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.

ಸದ್ಯ ಯುವತಿ ಸ್ಥಿತಿ ಗಂಭಿರವಾಗಿದ್ದು, ಕಳೆದ ಎರಡು ದಿನಗಳಿಂದ ಯುವತಿ ಸಾವು, ಬದುಕಿನ ಮಧ್ಯೆ ಹೋರಾಡುತ್ತಿದ್ದಾಳೆ. ಇತ್ತ ಪೊಲೀಸರು ಆರೋಪಿಯನ್ನು ಬಂಧಿಸಿ ಆತನ ವಿರುದ್ಧ ಪ್ರಕರಣ ದಾಖಲಿಸಿದ್ದು, ತನಿಖೆ ಕೈಗೊಂಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *