ತಲಕಾವೇರಿಯ ಬ್ರಹ್ಮಗಿರಿ ಬೆಟ್ಟದಲ್ಲಿ ಮತ್ತೆ ಬಿರುಕು

Public TV
2 Min Read

ಮಡಿಕೇರಿ: ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ಸತತ ಮಳೆ ಭಾರೀ ಅವಾಂತರ ಸೃಷ್ಟಿ ಮಾಡಿದ್ದು, ಪರಿಣಾಮ ಕಾವೇರಿ ತಾಯಿ ಉಗಮಸ್ಥಾನ ತಲಕಾವೇರಿಯ ಬ್ರಹ್ಮಗಿರಿ ಬೆಟ್ಟದಲ್ಲಿ ಬೃಹತ್ ಬಿರುಕು ಕಾಣಿಸಿಕೊಂಡಿದೆ. ಕೊಡವರ ಕುಲ ದೈವ ಕಾವೇರಿಯ ತವರು ತಲಕಾವೇರಿಯ ಬ್ರಹ್ಮಗಿರಿ ಬೆಟ್ಟದಲ್ಲಿ ಬೃಹತ್ ಬಿರುಕು ಕಾಣಿಸಿಕೊಂಡಿದ್ದು, ಇಲ್ಲಿ ಕಳೆದ 15 ದಿನಗಳ ಹಿಂದೆ ಸಣ್ಣ ಪ್ರಮಾಣದಲ್ಲಿ ಬಿರುಕು ಮೂಡಿತ್ತು. ಇದೀಗ ಮತ್ತೆ ಪವಿತ್ರ ಕ್ಷೇತ್ರ ತಲಕಾವೇರಿಯ ಜಲಮೂಲದ ನೆಲೆಯಾಗಿರುವ ಬ್ರಹ್ಮಗಿರಿ ಬೆಟ್ಟದಲ್ಲೂ ಬೃಹತ್ ಬಿರುಕು ಕಾಣಿಸಿಕೊಂಡಿದೆ.

ದೇಶದ ಜೀವನದಿಯ ಉಗಮ ಸ್ಥಾನ, ಕೊಡಗಿನ ಪವಿತ್ರ ಕ್ಷೇತ್ರ ತಲಕಾವೇರಿಯ ಜಲ ಮೂಲದ ನೆಲೆಯೆನಿಸಿರುವ ಬ್ರಹ್ಮಗಿರಿ ಬೆಟ್ಟಕ್ಕೆ ಇದೀಗ ಆಪತ್ತು ತಲೆದೂರಿದೆ. ಈ ವರ್ಷದ ಜಲಸ್ಫೋಟದ ಮಳೆಯ ಆರ್ಭಟಕ್ಕೆ ಬೆಟ್ಟದ ಬಹುತೇಕ ಕಡೆ ಬಿರುಕು ಕಾಣಿಸಿಕೊಂಡಿದೆ. ಮೇಲ್ನೋಟಕ್ಕೆ ಅಪಾಯಕಾರಿ ಚಿತ್ರಣ ಮೂಡಿಸುತ್ತದೆ. ಅಲ್ಲದೆ ಬ್ರಹ್ಮಗಿರಿ ಬೆಟ್ಟದಲ್ಲಿ ಕಳೆದ 15 ದಿನಗಳ ಹಿಂದೆ ಸಣ್ಣ ಪ್ರಮಾಣದಲ್ಲಿ ಬಿರುಕು ಮೂಡಿತ್ತು. ಈ ಹಿನ್ನೆಲೆಯಲ್ಲಿ ಭಾರತೀಯ ಭೂ ಸರ್ವೇಕ್ಷಣಾ ಇಲಾಖೆಯ ವಿಜ್ಞಾನಿಗಳು ಆಗಮಿಸಿ ಸ್ಥಳ ಪರಿಶೀಲನೆ ನಡೆಸಿದ್ದರು.

ತಲಕಾವೇರಿಯಿಂದ ಒಂದು ಕಿ.ಮೀ ಮುಂದೆ ಅಕ್ರಮವಾಗಿ ರೆಸಾರ್ಟ್ ನಿರ್ಮಾಣ ಮಾಡುತ್ತಿದ್ದು, ಕೋಳಿಕಾಡು ಪೈಸಾರಿ ಜಾಗದಲ್ಲಿ ಬೆಟ್ಟ ಕುಸಿಯುವ ಸ್ಥಳಕ್ಕೆ ಹೋಗಿ ವರದಿ ಮಾಡಿದ್ದರು. ಇದೀಗ ಮತ್ತೆ ಬ್ರಹ್ಮಗಿರಿ ತಪ್ಪಲಿನಲ್ಲಿ ದೂಡ್ಡ ಪ್ರಮಾಣದಲ್ಲಿ ಬೆಟ್ಟದ ಮೇಲೆ ಬಿರುಕು ಮೂಡುತ್ತಿದ್ದು ಸ್ಥಳೀಯರಲ್ಲಿ ಮತ್ತೆ ಅತಂಕ ಮನೆ ಮಾಡುತ್ತಿದೆ.

ಸಾರ್ವಜನಿಕರ ಅಭಿಪ್ರಾಯದಂತೆ 2014ರಲ್ಲಿ ಅರಣ್ಯ ಇಲಾಖೆಯಿಂದ ಬ್ರಹ್ಮಗಿರಿ ಬೆಟ್ಟದಲ್ಲಿ ಇಂಗು ಗುಂಡಿಗಳನ್ನು ಅಲ್ಲಲ್ಲಿ ತೆಗೆಯಲಾಯಿತು. ಅಲ್ಲದೆ ಅರಣ್ಯ ಸಸಿಗಳನ್ನು ನೆಡಲಾಯಿತು. ಅರಣ್ಯತೋಪು ಮತ್ತು ಇಂಗು ಗುಂಡಿಗಳ ಸಲುವಾಗಿ ಹಿಟಾಚಿ ಹಾಗೂ ಜೆಸಿಬಿ ಯಂತ್ರಗಳನ್ನು ಬಳಸಲಾಯಿತು. ಇದೇ ರೀತಿಯ ಕಾರ್ಯ 2016ರವರೆಗೂ ಮುಂದುವರಿಯಿತು. ಬ್ರಹ್ಮಗಿರಿ ಬೆಟ್ಟದಲ್ಲಿ ಈ ಯಂತ್ರಗಳನ್ನು ಬಳಸಿದ ಹಿನ್ನೆಲೆಯಲ್ಲಿ ನೆಲದ ಮಣ್ಣಿನ ಪದರ ಸಡಿಲಗೊಂಡು ಈಗಿನ ಮಳೆಯ ಸಂದರ್ಭ ಬೆಟ್ಟ ಬಿರುಕು ಬಿಟ್ಟು ಈ ದುರಂತಕ್ಕೆ ಕಾರಣವಾಗಿದೆ ಎಂದು ಸ್ಥಳೀಯರು ಅನಿಸಿಕೆ ವ್ಯಕ್ತಪಡಿಸುತ್ತಿದ್ದಾರೆ.

15 ದಿನಗಳ ಹಿಂದೆಯೂ ಭೂಮಿ ಬಿರುಕು ಬಿಟ್ಟಿದ್ದು, ಈಗ ಮತ್ತೆ ಕೊಡಗು ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಭೂಮಿ ಬಿರುಕುಬಿಟ್ಟಿದೆ. ಬೆಟ್ಟದ ಮೇಲ್ಭಾಗದಲ್ಲಿ 10 ಅಡಿಗೂ ಹೆಚ್ಚು ಉದ್ದ ಆಳದ ಕಂದಕ ಸೃಷ್ಟಿಯಾಗಿದ್ದು, ಸಾರ್ವಜನಿಕರು ಕಾವೇರಿ ತಾಯಿಯ ಭಕ್ತರು ಆತಂಕಕ್ಕೆ ಒಳಗಾಗಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *