‘ಜೇಮ್ಸ್’ ಸಿನಿಮಾ ನಿರ್ಮಾಪಕನಿಗೆ ಮೆದುಳು ಸರ್ಜರಿ : ಚೇತರಿಸಿಕೊಳ್ಳುತ್ತಿದ್ದಾರೆ ಕಿಶೋರ್ ಪತ್ತಿಕೊಂಡ

Public TV
1 Min Read

ಪುನೀತ್ ರಾಜ್ ಕುಮಾರ್ ನಟನೆಯ ‘ಜೇಮ್ಸ್’ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಪ್ರವೇಶ ಮಾಡಿದ್ದ ನಿರ್ಮಾಪಕ ಕಿಶೋರ್ ಪತ್ತಿಕೊಂಡ ನಿನ್ನೆ ರಾತ್ರಿ ಬಿಪಿ ಹೆಚ್ಚಾದ ಕಾರಣದಿಂದಾಗಿ ಪ್ರಜ್ಞೆ ತಪ್ಪಿದ್ದರು. ಕೂಡಲೇ ಅವರನ್ನು ಬೆಂಗಳೂರಿನ ಶೇಷಾದ್ರಿ ಪುರಂ ಅಪೋಲೋ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇದೀಗ ಅವರ ಮೆದುಳು ಸರ್ಜರಿಯಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಪಿಬಿ ಹೆಚ್ಚಾದ ಜೊತೆಗೆ ಅವರಿಗೆ ಸ್ಟ್ರೋಕ್ ಕೂಡ ಆಗಿದೆ ಎಂದು ಹೇಳಲಾಗುತ್ತಿದೆ. ನಿನ್ನೆ ರಾತ್ರಿಯೇ ಅವರಿಗೆ ಪಿಬಿ ಹೆಚ್ಚಾಗಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಪ್ರಜ್ಞೆ ತಪ್ಪಿದ ಕಾರಣದಿಂದಾಗಿ ಸಹಜವಾಗಿಯೇ ಆತಂಕ ಕೂಡ ಮನೆಮಾಡಿತ್ತು. ಇದೀಗ ಅಗತ್ಯ ಚಿಕಿತ್ಸೆ ನೀಡಲಾಗಿದ್ದು, ಆರೋಗ್ಯದಲ್ಲಿ ಚೇತರಿಕೆ ಕಾಣಿಸಿಕೊಂಡಿದೆ ಎಂದು ವೈದ್ಯರು ತಿಳಿಸಿರುವುದಾಗಿ ನಟ ಧೀರೇನ್ ರಾಮ್ ಕುಮಾರ್ ತಿಳಿಸಿದ್ದಾರೆ. ಇದನ್ನೂ ಓದಿ:ಸಾಯಿ ಪಲ್ಲವಿ ನಟನೆಯ ‘ಗಾರ್ಗಿ’ಗೆ ಕರ್ನಾಟಕದಲ್ಲಿ ಧರ್ಮ ಸಂಕಟ

ಪುನೀತ್ ರಾಜ್ ಕುಮಾರ್ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಗೆ ಪ್ರವೇಶ ಮಾಡಿರುವ ಕಿಶೋರ್ ಪತ್ತಿಕೊಂಡ, ಮೊದಲ ಸಿನಿಮಾದಲ್ಲೇ ಗೆಲುವು ಕಂಡವರು. ಮತ್ತಷ್ಟು ಸಿನಿಮಾಗಳನ್ನು ನಿರ್ಮಾಣ ಮಾಡುವುದಕ್ಕೆ ಮುಂದಾಗಿದ್ದಾರೆ. ಒಳ್ಳೆಯ ನಿರ್ಮಾಪಕ ಎಂದೂ ಗುರುತಿಸಿಕೊಂಡಿರುವ ಕಿಶೋರ್ ಅವರ ಆರೋಗ್ಯ ಬೇತ ಚೇತರಿಸಿಕೊಳ್ಳಲಿ ಎಂದು ಅಭಿಮಾನಿಗಳು ಮತ್ತು ಹಿತೈಷಿಗಳು ಹಾರೈಸಿದ್ದಾರೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *