`ಬ್ರಾಹ್ಮಣ ಸಿಎಂ’ ಬಾಂಬ್ – ಡ್ಯಾಮೇಜ್ ತಪ್ಪಿಸಲು 50 ಸಾವಿರ ವಾಟ್ಸಪ್ ಗ್ರೂಪ್ ಮೊರೆಹೋದ BJP

Public TV
2 Min Read

ಬೆಂಗಳೂರು: 2023ರ ಕರ್ನಾಟಕ ವಿಧಾನಸಭಾ ಚುನಾವಣೆಯ (Karnataka Assembly Election 2023) ಸನಿಹದಲ್ಲಿ ಬಿಜೆಪಿ, ಆರ್‌ಎಸ್‌ಎಸ್ (BJP, RSS) ಟೀಕಿಸುವ ಭರದಲ್ಲಿ ಬ್ರಾಹ್ಮಣರ ಬಗ್ಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಆಡಿದ ಮಾತುಗಳು ಈಗ ಚರ್ಚೆಗೆ ಗ್ರಾಸವಾಗಿವೆ.

ಈ ಬೆನ್ನಲ್ಲೇ ಹೆಚ್.ಡಿ ಕುಮಾರಸ್ವಾಮಿ ಅವರ `ಬ್ರಾಹ್ಮಣ ಸಿಎಂ’ (Bramhana CM) ಹೇಳಿಕೆ ಹಾಗೂ ವಿಪಕ್ಷ ನಾಯಕರ ವಾಗ್ದಾಳಿ, ಆರೋಪಗಳಿಂದ ಪಕ್ಷಕ್ಕೆ ಆಗುವ ಹಾನಿ ತಪ್ಪಿಸಲು ಬಿಜೆಪಿ ಮಾಸ್ಟರ್ ಪ್ಲಾನ್ ಮಾಡುತ್ತಿದೆ. ವಿಪಕ್ಷ ನಾಯಕರ ಹೇಳಿಕೆಗಳಿಂದ ಪಕ್ಷಕ್ಕೆ ಆಗುವ ಹಾನಿ ತಡೆಯುವ ಸಲುವಾಗಿ ಬಿಜೆಪಿ ಜಾಲತಾಣಗಳ ಮೊರೆ ಹೋಗಿದೆ.

ಎಚ್ಚೆತ್ತ ಕೇಸರಿ ಪಡೆ: `ಬ್ರಾಹ್ಮಣ ಸಿಎಂ ಬಾಂಬ್’ನಿಂದ ಒಂದು ಕಡೆ ಹೆಚ್‌ಡಿಕೆ ವಿರುದ್ಧ ಪ್ರತ್ಯಾಸ್ತ್ರ, ಮತ್ತೊಂದು ಕಡೆ ನಷ್ಟ ತಪ್ಪಿಸಲು ತಯಾರಿ ನಡೆಸಿರೊ ಕೇಸರಿ ಪಡೆ ಬೂತ್ ಮಟ್ಟದಲ್ಲಿ ರಚಿಸಿರುವ 50 ಸಾವಿರ ವಾಟ್ಸಪ್ ಗ್ರೂಪ್ ಗಳಲ್ಲಿ (Whatsup Group) ವಿಪಕ್ಷ ನಾಯಕರ ಹೇಳಿಕೆ ಸುಳ್ಳೆಂದು ಬಿಂಬಿಸಲು ಅಭಿಯಾನ ಶುರು ಮಾಡಿದೆ. ಇದನ್ನೂ ಓದಿ: ರೇವಣ್ಣ ಹೊಳೆನರಸೀಪುರದ ಮಹಾರಾಜ – ಶಾಸಕ ಪುಟ್ಟರಾಜು

ಮನೆಮನೆಗೂ ಮನವರಿಕೆ ಮಾಡಿಕೊಡಲು ಪೋಸ್ಟರ್ ಹಂಚಲು ಸೂಚನೆ ನೀಡಿದೆ. ಹೆಚ್‌ಡಿಕೆ, ಸಿದ್ದರಾಮಯ್ಯ (Siddaramaiah), ಡಿಕೆಶಿ (DK Shivakumar) ಸೇರಿ ಇತರ ನಾಯಕರ ಆರೋಪಗಳು ಎಲ್ಲವೂ ಸುಳ್ಳು ಎಂದು ಈ ಮೂಲಕ ಬಿಂಬಿಸಲು ಹೊರಟಿದೆ. ಜೊತೆಗೆ ಹೇಳಿಕೆ ಕೊಟ್ಟ ವಿಪಕ್ಷ ನಾಯಕರ ವಿರುದ್ಧ ಜನಾಭಿಪ್ರಾಯ ಸಂಗ್ರಹಕ್ಕೂ ಮುಂದಾಗಿದೆ. ಈ ಮೂಲಕ ಪಕ್ಷಕ್ಕೆ ಹಾಗುವ ಹಾನಿಯನ್ನು ತಡೆಯಲು ಮುಂದಾಗಿದೆ. ಇದನ್ನೂ ಓದಿ: ಚಿಕನ್‌, ಗೀರೈಸ್‌ ತಿಂದು ಫುಡ್‌ ಪಾಯಿಸನ್‌ – ನರ್ಸಿಂಗ್‌ ಕಾಲೇಜಿನ 137 ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು

ಈ ನಡುವೆ ಬಿಜೆಪಿ, ಗುಂಪುಗಾರಿಕೆ, ಲಂಚ, ಅಕ್ರಮ, ಜಾತೀಯತೆಗೆ ನೀರೆರೆಯುವುದು ಕಾಂಗ್ರೆಸ್‌ನ ಸಂಸ್ಕೃತಿ. ಇದು ಗಾಂಧಿ ಕುಟುಂಬ ನೆಟ್ಟ ಬೀಜ. ಇದನ್ನು ಬುಡ ಸಮೇತ ಕಿತ್ತೆಸೆದರೆ ಮಾತ್ರ ರಾಜ್ಯದಲ್ಲಿ ನೆಮ್ಮದಿ ಎಂದು ಟ್ವೀಟ್ ಮೂಲಕ ಬಿಜೆಪಿ ಟೀಕಿಸಿದೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *