ವಿಧಾನಸಭೆಯಲ್ಲಿ ಬಿಜೆಪಿ ಶಾಸಕರ ಜೊತೆ ಸತೀಶ್ ಜಾರಕಿಹೊಳಿ ಪ್ರತ್ಯೇಕ ಚರ್ಚೆ!

Public TV
0 Min Read

ಬೆಂಗಳೂರು: ವಿಧಾನಸಭೆಯ ವಿಪಕ್ಷ ನಾಯಕರ ಮೊಗಸಾಲೆಯಲ್ಲಿ ಬಿಜೆಪಿ ಶಾಸಕರಾದ ಬಸವರಾಜ ಬೊಮ್ಮಾಯಿ ಹಾಗೂ ಸಿ.ಎಂ.ಉದಾಸಿ ಅವರ ಜತೆ ಕಾಂಗ್ರೆಸ್ ಮಾಜಿ ಸಚಿವ ಸತೀಶ್ ಜಾರಕಿಹೊಳಿ ಅವರು ಮಾತುಕತೆ ನಡೆಸುತ್ತಿದ್ದಿದ್ದು ಇಂದು ಕಂಡುಬಂತು.

ಶಾಸಕರು ಮಾತನಾಡುತ್ತಿರುವುದನ್ನು ನೋಡಿದ ಬಿಎಸ್ ಯಡಿಯೂರಪ್ಪ ಅವರು ನಗುತ್ತಲೇ, “ಏನ್ರಪ್ಪಾ, ಇಬ್ಬರು ಸೇರಿ ಅವರನ್ನ ಕೂರಿಸಿಕೊಂಡು ಮಾತನಾಡುತ್ತಿದ್ದಿರಾ. ಏನು ವಿಷಯ” ಎಂದು ಕೇಳಿದರು.

ಬಿ.ಎಸ್.ಯಡಿಯೂರಪ್ಪ ಅವರ ಮಧ್ಯ ಪ್ರವೇಶದಿಂದ ಕಸಿವಿಸಿಗೊಂಡ ಶಾಸಕರು ಅಲ್ಲಿಂದ ತೆರಳಿದರು.

Share This Article
Leave a Comment

Leave a Reply

Your email address will not be published. Required fields are marked *