ಬ್ರಿಟನ್ ರಾಜಕುಮಾರನಿಗೆ ಬೆಂಗ್ಳೂರು ವೈದ್ಯನಿಂದ ಚಿಕಿತ್ಸೆ

Public TV
1 Min Read

– ಆಯುರ್ವೇದ ವೈದ್ಯ ಪದ್ಧತಿಯಿಂದ ಗುಣಮುಖ

ಬೆಂಗಳೂರು: ಬ್ರಿಟನ್‍ ಪ್ರಿನ್ಸ್ ಚಾರ್ಲ್ಸ್‌ಗೆ ಕೊರೊನಾ ವೈರಸ್ ಬಂದಿದ್ದು, ಸೋಂಕು ಗುಣಮುಖವಾಗುವುದಕ್ಕೆ ಭಾರತದ ಆಯುರ್ವೇದ ವೈದ್ಯ ಪದ್ಧತಿ ಮೊರೆ ಹೋಗಿ ಕೊರೊನಾ ಗೆದ್ದು ಬಂದಿದ್ದಾರೆ.

ಬೆಂಗಳೂರು ಮೂಲದ ವೈದ್ಯ ಐಸಾಕ್ ಮಥಾಯ್ ಬ್ರಿಟನ್‍ನ ರಾಜಕುಮಾರನಿಗೆ ಚಿಕಿತ್ಸೆ ನೀಡಿದ್ದಾರೆ. ಕೊರೊನಾ ಸೋಂಕಿತರಾಗಿದ್ದ ಪ್ರಿನ್ಸ್ ಚಾರ್ಲ್ಸ್‌ಗೆ ಐಸಾಕ್ ಮಥಾಯ್ ಇಲ್ಲಿಂದಲೇ ಆಯುರ್ವೇದದ ಚಿಕಿತ್ಸೆ ನೀಡಿದ್ದಾರೆ. ಕೇಂದ್ರ ಆಯುಷ್ ಸಚಿವ ಶ್ರೀಪಾದ್ ನಾಯ್ಕ್ ಈ ವಿಷಯವನ್ನು ಬಹಿರಂಗಪಡಿಸಿದ್ದಾರೆ.

ಬೆಂಗಳೂರಿನ ಆಯುರ್ವೇದ ವೈದ್ಯರೊಬ್ಬರು ತಮ್ಮ ವೈದ್ಯ ಪದ್ಧತಿಯಿಂದ ಬ್ರಿಟನ್ ಪ್ರಿನ್ಸ್ ಚಾರ್ಲ್ಸ್‌ಗೆ ಔಷಧ ಸೂಚಿಸಿ ಅವರು ಗುಣಮುಖರಾಗಿದ್ದಾರೆಂದು ಹೇಳಿರುವುದನ್ನು ಹಂಚಿಕೊಂಡಿದ್ದಾರೆ. ಈ ಮೂಲಕ ಆಯುರ್ವೇದ ಹಾಗೂ ಹೋಮಿಯೋಪತಿಯಲ್ಲಿ ಕೊರೊನಾ ವೈರಸ್‍ಗೆ ಚಿಕಿತ್ಸೆ ಇದೆ ಎಂದು ಶ್ರೀಪಾದ್ ನಾಯ್ಕ್ ಹೇಳಿದ್ದಾರೆ.

ಬ್ರಿಟನ್‍ನ ಪ್ರಿನ್ಸ್ ಚಾರ್ಲ್ಸ್‌ಗೆ ಆಯುರ್ವೇದ ಔಷಧ ನೀಡಿರುವ ವೈದ್ಯ ಐಸಾಕ್ ಮಥಾಯ್ ಅವರು ‘ಸೌಖ್ಯ’ ಎಂಬ ಆಯುರ್ವೇದ ರೆಸಾರ್ಟ್ ನಡೆಸುತ್ತಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *