ಯಾದಗಿರಿ: ಹೃದಯಾಘಾತಕ್ಕೆ ಬಲಿಯಾಗಿದ್ದ ತಮ್ಮನ ಸಾವಿನ ಸುದ್ದಿ ಕೇಳಿ ಅಣ್ಣನೂ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಯಾದಗಿರಿ (Yadagiri) ಜಿಲ್ಲೆಯ ಸುರಪುರ (Surpur) ತಾಲೂಕಿನ ಕೆಂಭಾವಿಯಲ್ಲಿ (Kembhavi) ನಡೆದಿದೆ.ಇದನ್ನೂ ಓದಿ: ಅತ್ಯಾಚಾರ ಆರೋಪದಲ್ಲಿ ಬಂಧನ; ಪೊಲೀಸರ ಮೇಲೆ ಗುಂಡು ಹಾರಿಸಿ ಆಪ್ ಶಾಸಕ ಪರಾರಿ
ತಮ್ಮ ಇರ್ಫಾನ್ ಪೇಶಮಾಮ್ (38) ಹಾಗೂ ಅಣ್ಣ ಶಮಶುದ್ದೀನ್ ಪೇಶಮಾಮ್ (42) ಮೃತರು.
ಮಂಗಳವಾರ (ಸೆ.2) ಬೆಳಿಗ್ಗೆ ತಮ್ಮ ಇರ್ಫಾನ್ ಹಠಾತ್ ಹೃದಯಾಘಾತದಿಂದ ಸಾವನ್ನಪ್ಪಿದ್ದ. ಈ ಸುದ್ದಿ ತಿಳಿದ ಅಣ್ಣ ಶಮಶುದ್ದೀನ್ ಗಾಬರಿಯಲ್ಲಿಯೇ ತಮ್ಮನನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ. ಈ ವೇಳೆ ಮಾರ್ಗಮಧ್ಯದಲ್ಲಿಯೇ ಅಣ್ಣನೂ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. ಕೆಂಭಾವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.ಇದನ್ನೂ ಓದಿ: ನನ್ನಮ್ಮನಿಗೆ ಮಾತ್ರ ಅಲ್ಲ, ಭಾರತೀಯ ತಾಯಂದಿರಿಗೆ ಮಾಡಿದ ಅವಮಾನ – ಪ್ರತಿಪಕ್ಷಗಳಿಗೆ ಮೋದಿ ತಿರುಗೇಟು