ಸಿನಿಮೀಯ ರೀತಿಯಲ್ಲಿ ಹಾಡಹಗಲೇ ಮಚ್ಚಿನಿಂದ ಕೊಚ್ಚಿ ವ್ಯಕ್ತಿಯ ಕೊಲೆ

Public TV
1 Min Read

ರಾಯಚೂರು: ಸಿಂಧನೂರು ತಾಲೂಕಿನ ಮುಚ್ಚಳಕ್ಯಾಂಪ್ ಬಳಿ ಸಿನಿಮೀಯ ರೀತಿಯಲ್ಲಿ ಸ್ಕಾರ್ಪಿಯೋ ಕಾರಿನಲ್ಲಿ ಬಂದು ಬೈಕ್‍ಗೆ ಅಡ್ಡಗಟ್ಟಿ ಮಚ್ಚಿನಿಂದ ಕೊಚ್ಚಿ ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ.

ಸಿಂಧನೂರು ತಾಲೂಕಿನ ಗೀತಾಕ್ಯಾಂಪ್ ನಿವಾಸಿ 50 ವರ್ಷದ ಕೆ.ಪಾಪರೆಡ್ಡಿ ಕೊಲೆಯಾಗಿರುವ ವ್ಯಕ್ತಿ. ಜಮೀನು ವಿವಾದ ಹಿನ್ನೆಲೆಯಲ್ಲಿ ಹಳೇ ವೈಷಮ್ಯ ಸಾಧಿಸಿ ಕೊಲೆ ಮಾಡಲಾಗಿದೆ ಅಂತ ಮೃತನ ಸಂಬಂಧಿಕರು ಆರೋಪಿಸಿದ್ದಾರೆ.

ಹೈದರಾಬಾದ್ ನಲ್ಲಿರುವ ಭೋಸ್ ರೆಡ್ಡಿ ಮತ್ತು ಸುಮನ್ ರೆಡ್ಡಿ ಎಂಬುವವರು ಕೊಲೆಗೆ ಕಾರಣ ಎನ್ನಲಾಗಿದೆ. ಕೊಲೆಯಾದ ಸ್ಥಳದಲ್ಲಿ ಮಚ್ಚು ಲಾಂಗುಗಳು ಪತ್ತೆಯಾಗಿದ್ದು, ಇದು ಸುಪಾರಿ ಕೊಲೆ ಅಂತ ಶಂಕಿಸಲಾಗಿದೆ.

ಸ್ಥಳಕ್ಕೆ ಸಿಂಧನೂರು ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಶ್ವಾನದಳ, ಬೆರಳಚ್ಚು ತಜ್ಞರು ಕೊಲೆಯಾದ ಸ್ಥಳದಲ್ಲಿ ಪರಿಶೀಲನೆ ನಡೆಸಿದ್ದಾರೆ. ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚೇತನಸಿಂಗ್ ರಾಥೋರ್ ಭೇಟಿ ನೀಡಿ ಮಾಹಿತಿ ಕಲೆಹಾಕುತ್ತಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *