ಬಿಎಸ್‍ವೈ ರಾಜಕೀಯದಲ್ಲೇ ಅತ್ಯಂತ ಬೇಜವಾಬ್ದಾರಿಯುತ ಮನುಷ್ಯ: ಸಿಎಂ

Public TV
1 Min Read

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಮುಂದೆ ಸಿದ್ದರಾಮಯ್ಯ ಬಚ್ಚಾ ಎಂದು ಹೇಳಿಕೆ ನೀಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ವಿರುದ್ದ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಮಾತನಾಡಿ ಅವರು ಯಡಿಯೂರಪ್ಪ ರಾಜಕೀಯದಲ್ಲಿ ಅತ್ಯಂತ ಬೇಜವಾಬ್ದಾರಿಯುತ ಮನುಷ್ಯ. ಯಡಿಯೂರಪ್ಪಗೆ ರಾಜಕೀಯ ಸಂಸ್ಕೃತಿ ಇಲ್ಲ. ಅವರಿಗೆ ಸಂಸದೀಯ ಪದಗಳೇ ಗೊತ್ತಿಲ್ಲ. ನಾನು ಮೋದಿ, ಯಡಿಯೂರಪ್ಪ ಇಬ್ಬರನ್ನು ಹೋಲಿಕೆ ಮಾಡಿಕೊಳ್ಳುವುದಿಲ್ಲ. 40 ವರ್ಷಗಳಿಂದ ಸಾರ್ವಜನಿಕ ರಾಜಕೀಯದಲ್ಲಿ ಸೇವೆ ಸಲ್ಲಿಸಿದ್ದೇನೆ ಎಂದು ಹೇಳಿದರು.

ಸಿದ್ದರಾಮಯ್ಯ ಅಧಿಕಾರದಿಂದ ಕೆಳಗಿಳಿದ ಮೇಲೆ ಅಚ್ಚೇ ದಿನ ಬರುತ್ತದೆ ಎನ್ನುವ ಬಿಎಸ್ ವೈ ಹೇಳಿಕೆಗೂ ತಿರುಗೇಟು ನೀಡಿದ ಅವರು, ಅಚ್ಚೇ ದಿನ ಬರುತ್ತೆ ಅಂತ ಹೇಳಿದ್ದು ಯಾರು? ಮೋದಿ ಹೇಳಿ ಎಷ್ಟು ದಿನ ಆಯ್ತು? ಕ್ಯಾ ಅಚ್ಚೇ ದಿನ್ ಆಗಯಾ ಕ್ಯಾ ಅಂತ ಹಿಂದಿಯಲ್ಲೇ ಪ್ರಶ್ನೆ ಮಾಡಿದರು. ಬಿಜೆಪಿಯವರು ತಿಪ್ಪರಲಾಗ ಹಾಕಿದ್ರೂ ಮುಂದಿನ ಚುನಾವಣೆಯಲ್ಲಿ ಮತ್ತೆ ಅಧಿಕಾರಕ್ಕೆ ಬರಲಿ ಸಾಧ್ಯವಿಲ್ಲ. ಬಿಜೆಪಿ ನಾಯಕರು, ಯಡಿಯೂರಪ್ಪ ಹತಾಶರಾಗಿದ್ದಾರೆ. ಅದಕ್ಕೆ ಏನೇನೋ ಬಾಯಿಗೆ ಬಂದಂತೆ ಮಾತಾಡುತ್ತಿದ್ದಾರೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎಂದು ಗೊತ್ತಾಗಿದೆ ಅದ್ದರಿಂದಲೇ ಅವರು ಹೀಗೆ ಕಿತಾಪತಿ ಮಾಡುತ್ತಿದ್ದಾರೆ. ಸತ್ತ ಹೆಣದ ಮೇಲೆ ರಾಜಕೀಯ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ನನ್ನನ್ನು ಕಂಡರೆ ಮೋದಿಗೆ ಭಯ ಎಂದು ಸಿದ್ದರಾಮಯ್ಯ ಹೇಳಿಕೆ ನೀಡಿದ್ದರು. ಈ ವಿಚಾರವನ್ನು ಕಲಬುರಗಿಯಲ್ಲಿ ನಡೆದ ನವಕರ್ನಾಟಕ ಪರಿವರ್ತನಾ ಯಾತ್ರೆಯ ಸಮಾವೇಶದಲ್ಲಿ ಬಿಎಸ್‍ವೈ ಪ್ರಸ್ತಾಪಿಸಿ, ಮೋದಿ ಮುಂದೆ ಸಿದ್ದರಾಮಯ್ಯ ಬಚ್ಚಾ, ನಾಚಿಕೆಯಾಗಬೇಕು ನಿಮಗೆ ಎಂದು ಹೇಳಿದ್ದರು. ಅಲ್ಲದೇ ಸಿಎಂ ರಾಜ್ಯದಲ್ಲಿ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದರು.

 

Share This Article
Leave a Comment

Leave a Reply

Your email address will not be published. Required fields are marked *