ಅಭಿಮಾನಿ ಮನೆಗೆ ಭೇಟಿ ನೀಡಿ ಭಾವುಕರಾದ ಬಿಎಸ್‍ವೈ

Public TV
1 Min Read

ದಾವಣಗೆರೆ: ಯಡಿಯೂರಪ್ಪನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ ಸುದ್ದಿ ಕೇಳಿ ಹೃದಯಾಘಾತದಿಂದ ಸಾವನ್ನಪ್ಪಿದ್ದರು. ಇಂದು ಅಭಿಮಾನಿ ಮನೆಗೆ ಭೇಟಿ ನೀಡಿದ ಮಾಜಿ ಸಿಎಂ ಯಡಿಯೂರಪ್ಪ ಕುಟುಂಬಸ್ಥರಿಗೆ ಸಾಂತ್ವನ ಹೇಳುವ ವೇಳೆ ಒಂದು ಕ್ಷಣ ಭಾವುಕರಾದ್ರು.

ಯಡಿಯೂರಪ್ಪನವರು ರಾಜಿನಾಮೆ ಸಲ್ಲಿಸುತ್ತಿದ್ದಂತೆ ಟಿವಿ ನೋಡುತ್ತಿದ್ದ ಚನ್ನಬಸಪ್ಪ ಕಣ್ಣೀರು ಹಾಕಿದ್ದಾರೆ. ನಂತರ ಫೋನ್ ನಲ್ಲಿ ಸ್ನೇಹಿತರೊಂದಿಗೆ ಮಾತನಾಡಿ, ಕುಸಿದು ಬಿದ್ದು ಸಾವನ್ನಪ್ಪಿದ್ರು. ಇಂದು ಚನ್ನಬಸಪ್ಪರ ಪತ್ನಿ ರತ್ನಮ್ಮ ಹಾಗೂ ಮಕ್ಕಳಿಗೆ ದೈರ್ಯ ತುಂಬಿ ಸಾಂತ್ವನ ಹೇಳಿದರು.

ವೀರಶೈವ ಲಿಂಗಾಯತ ಮುಖ್ಯಮಂತ್ರಿಯಾಗಿದ್ದು, ಬಿಎಸ್‍ವೈ ಸಿಎಂ ಆಗಿ ಅಧಿಕಾರ ಸ್ವೀಕರಿಸಿದಾಗ ಚನ್ನಬಸಪ್ಪ ಸಂಭ್ರಮಾಚರಣೆ ಮಾಡಿದ್ದರು. ಸಂಬಂಧಿಕರಿಗೆಲ್ಲ ಫೋನ್ ಮಾಡಿ ಸಂತೋಷ ಹಂಚಿಕೊಂಡಿದ್ದರು. ವೀರಶೈವ ಲಿಂಗಾಯತ ಸಮುದಾಯದ ಮುಖಂಡ ಒಬ್ಬರು ಸಿಎಂ ಆಗಿದ್ದಾರೆ ಎಂದು ಖುಷಿಪಟ್ಟಿದ್ದರು.

Share This Article
Leave a Comment

Leave a Reply

Your email address will not be published. Required fields are marked *