ಟೀ ಕುಡಿಯಲು ಬರ್ತಿದ್ದರು, ಬಿಎಸ್‍ವೈ ಮೊಮ್ಮಗಳು ಅಂತ ಗೊತ್ತಿರ್ಲಿಲ್ಲ- ಸೌಂದರ್ಯ ಸಾವಿಗೆ ಸ್ಟಾಲ್ ಯುವಕ ಬೇಸರ

Public TV
1 Min Read

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಮೊಮ್ಮಗಳು ಡಾ. ಸೌಂದರ್ಯ ಆತ್ಮಹತ್ಯೆ ವಿಚಾರ ತೀವ್ರ ಆಘಾತವನ್ನುಂಟುಮಾಡಿದೆ. ಇದೀಗ ಬಾರಿಂಗ್ ಆಸ್ಪತ್ರೆ ಆವರಣದಲ್ಲಿದ್ದ ಟೀ ಸ್ಟಾಲ್ ಯುವಕ ಕೂಡ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಯುವಕ ಚಂದನ್, ಸೌಂದರ್ಯ ಅವರು ತುಂಬಾ ಅನೊನ್ಯವಾಗಿದ್ದರು. ತಮ್ಮ ಸ್ನೇಹಿತರ ಜೊತೆ ಆಗಾಗ ಟೀ ಸ್ಟಾಲ್ ಗೆ ಬರುತ್ತಿದ್ದರು. ಆದರೆ ಅವರು ಬಿಎಸ್ ಯಡಿಯೂರಪ್ಪ ಅವರ ಮೊಮ್ಮಗಳು ಅಂತ ಗೊತ್ತಿರಲಿಲ್ಲ. ಇದೀಗ ಆತ್ಮಹತ್ಯೆ ವಿಷಯ ತಿಳಿದ ಕೂಡಲೇ ನಮ್ಮ ಅಕ್ಕನೇ ಹೋದ್ರು ಅನ್ನೋ ತರ ಶಾಕ್ ಆಯ್ತು ಎಂದು ಕಣ್ಣೀರು ಹಾಕಿದರು. ಒಟ್ಟಿನಲ್ಲಿ ಸೌಂದರ್ಯನನ್ನು ಕಳೆದುಕೊಂಡ ಬೌರಿಂಗ್ ಆಸ್ಪತ್ರೆಯ ಸಿಬ್ಬಂದಿ ತೀವ್ರ ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಇದನ್ನೂ ಓದಿ: ವಿಭಿನ್ನವಾಗಿ ಪ್ರೆಗ್ನೆಸ್ಸಿ ಫೋಟೋಶೂಟ್ ಮಾಡಿಸಿಕೊಂಡ ನಟಿ ದಿಶಾ..!

ಸೌಂದರ್ಯ ಹಾಗೂ ಪತಿ ಡಾ. ನಿರಂಜನ್ ಅವರು ಧವಳಗಿರಿ ಅಪಾರ್ಟ್ ಮೆಂಟ್‍ನಲ್ಲಿ ವಾಸವಾಗಿದ್ದರು. ಆದರೆ ಶುಕ್ರವಾರ ಡಾಲರ್ಸ್ ಕಾಲೋನಿಯ ಲೆಗೆಸ್ಸಿ ಅಪಾರ್ಟ್ ಮೆಂಟ್‍ ಫ್ಲಾಟ್‍ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಳಗ್ಗೆ 11 ಗಮಟೆಯ ಸುಮಾರಿಗೆ ಮಗುವನ್ನು ಪಕ್ಕದ ರೂಮ್‍ನಲ್ಲಿ ಮಲಗಿಸಿ ತಾನು ಬೇರೊಂದು ರೂಮ್‍ನಲ್ಲಿ ಸೌಂದರ್ಯ ಸೂಸೈಡ್ ಮಾಡಿಕೊಂಡಿದ್ದಾರೆ.

ಬಿಎಸ್‍ವೈ ಮೊಮ್ಮಗಳು ಸೌಂದರ್ಯ ಅವರು ರಾಮಯ್ಯ ಆಸ್ಪತ್ರೆಯಲ್ಲಿ ರೇಡಿಯಾಲಜಿಸ್ಟ್ ಆಗಿದ್ದರು. ಅವರ ಪತಿ ಡಾ. ನಿರಂಜನ್ ಕೂಡ ಅದೇ ಆಸ್ಪತ್ರೆಯಲ್ಲಿ ರೇಡಿಯಾಲಜಿಸ್ಟ್ ಆಗಿದ್ದರು. ದಂಪತಿಗೆ 9 ತಿಂಗಳ ಗಂಡು ಮಗು ಇದೆ. ರಾಮಯ್ಯದಲ್ಲಿ ವೈದ್ಯಕೀಯ ಶಿಕ್ಷಣ ಮುಗಿಸಿ ಬೌರಿಂಗ್‍ನಲ್ಲೇ ಸರ್ಜನ್ ಆಗಿದ್ದ ಸೌಂದರ್ಯ ಅವರು ಮಗುವಾದ ನಂತರ ಕೆಲಸ ಬಿಟ್ಟಿದ್ದರು. ನಂತರ ಡಿಪ್ರೆಷನ್‍ಗೆ ಒಳಗಾಗಿದ್ದರು. ಕಳೆದ ಮೂರು ತಿಂಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು ಎಂದು ತಿಳಿದುಬಂದಿದೆ.

Share This Article
Leave a Comment

Leave a Reply

Your email address will not be published. Required fields are marked *