ಸಾವರ್ಕರ್ ರಥಯಾತ್ರೆಗೆ ಬಿಎಸ್‌ವೈ ಚಾಲನೆ- ಸಿದ್ದರಾಮಯ್ಯಗೆ ಠಕ್ಕರ್ ಕೊಡಲು ಬಿಜೆಪಿ ಪ್ಲ್ಯಾನ್

Public TV
1 Min Read

ಮೈಸೂರು: ಸ್ವಾತಂತ್ರ್ಯ ಸೇನಾನಿ ಸಾವರ್ಕರ್ ವಿಚಾರದಲ್ಲಿ ದೊಡ್ಡ ವಿವಾದ ಸೃಷ್ಟಿಸಿರುವ ಕಾಂಗ್ರೆಸ್‍ಗೆ ಮೈಸೂರಿನ ಸಾವರ್ಕರ್ ಪ್ರತಿಷ್ಠಾನ ರಥ ಯಾತ್ರೆ ಮೂಲಕ ತಿರುಗೇಟು ನೀಡಲು ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಇಂದು ರಥಯಾತ್ರೆಗೆ ಮಾಜಿ ಸಿಎಂ ಬಿಎಸ್‌ವೈ ಚಾಲನೆ ನೀಡಿದರು.

ಮೈಸೂರಿನ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಿಂದ ಸಾವರ್ಕರ್ ರಥ ಯಾತ್ರೆ ಆರಂಭವಾಗಿದ್ದು, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಈ ರಥ ಯಾತ್ರೆಗೆ ಚಾಲನೆ ನೀಡಿದರು. ಈ ರಥವೂ ಮೈಸೂರಿನ ಅನೇಕ ಭಾಗಗಳಲ್ಲಿ ಸಂಚರಿಸಲಿದೆ. ರಥದಲ್ಲಿ ಸಾವರ್ಕರ್ ಅವರ ಜೀವನ ಚರಿತ್ರೆಯ ಅಂಶಗಳನ್ನು ಮೂಡಿಸಲಿದ್ದು, ಸಾವರ್ಕರ್ ಇತಿಹಾಸವನ್ನು ಜನರಿಗೆ ಮುಟ್ಟಿಸುವ ಉದ್ದೇಶದಿಂದ ಈ ರಥಯಾತ್ರೆ ಆಯೋಜಿಸಲಾಗಿದೆ. ಇದನ್ನೂ ಓದಿ: ಮನೆ ಮನೆಗೆ ಸಾವರ್ಕರ್ ಅಭಿಯಾನ ಆರಂಭ – 6 ರೂ.ಗೆ ಪುಸ್ತಕ ಬಿಡುಗಡೆ

ಮೈಸೂರಲ್ಲಿ ಇಂದಿನಿಂದ 8 ದಿನ ಸಾವರ್ಕರ್ ರಥ ಯಾತ್ರೆ ನಡೆಯಲಿದೆ. ದೊಡ್ಡ ಎಲ್‍ಇಡಿ ಪರದೆಯನ್ನು ರಥದಲ್ಲಿ ಅಳವಡಿಸಿದ್ದು, ಎಲ್‍ಇಡಿಯಲ್ಲಿ ಸಾವರ್ಕರ್ ಕುರಿತು ಟಿವಿಗಳಲ್ಲಿ ಬಂದ ಚರ್ಚೆಗಳು, ಸಾವರ್ಕರ್ ಅವರ ಜೀವನ ಪ್ರಮುಖ ಅಂಶಗಳ ವೀಡಿಯೋಗಳನ್ನು ಹಾಕಲಾಗುತ್ತಿದೆ. ನಗರದ ಪ್ರಮುಖ ವೃತ್ತಗಳಲ್ಲಿ ಈ ರಥ ನಿಲ್ಲಲಿದ್ದು, ಜನರಿಗೆ ಸಂಕ್ಷಿಪ್ತವಾಗಿ ಸಾವರ್ಕರ್ ಅವರ ಜೀವನವನ್ನು ತಿಳಿಸುವ ಕೆಲಸ ಮಾಡಲಾಗುತ್ತದೆ. ಈ ಮೂಲಕ ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಅವರ ತವರಲ್ಲೇ ಸಿದ್ದರಾಮಯ್ಯ ಅವರಿಗೆ ಠಕ್ಕರ್‌ ನೀಡಲು ಬಿಜೆಪಿ ಸಿದ್ಧವಾಗಿದೆ.  ಇದನ್ನೂ ಓದಿ: ಮುಸ್ಲಿಮರನ್ನು ಕೇಳಲು ತೊಡೆ ನಡುಗುತ್ತಾ: ಸಿದ್ದರಾಮಯ್ಯಗೆ ಪ್ರತಾಪ್ ಸಿಂಹ ಪ್ರಶ್ನೆ

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *