ರಾಜ್ಯದ ಚುನಾವಣಾ ಫಲಿತಾಂಶ ಲೋಕಸಭೆಗೆ ದಿಕ್ಸೂಚಿ ಅಲ್ಲ: ಬಿಎಸ್‍ವೈ

Public TV
1 Min Read

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೂ (Karnataka Election) ಲೋಕಸಭಾ ಚುನಾವಣೆಗೂ ಸಂಬಂಧವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ (BS Yediyurappa) ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಜನ ಕೊಟ್ಟ ತೀರ್ಪನ್ನು ಗೌರವದಿಂದ ಸ್ವೀಕರಿಸುತ್ತೇವೆ. ನಾವು ಹಿಂದೆ 25 ಲೋಕಸಭೆ ಸೀಟ್ ಗೆದ್ದಿದ್ವಿ. ಈ ಸಲವೂ ಅಷ್ಟೇ ಸೀಟ್ ಗೆದ್ದು ಮೋದಿಯವರು ಮತ್ತೆ ಪ್ರಧಾನಿ ಮಾಡಲು ಸಹಕರಿಸುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: Karnataka Election 2023 Result – ಕಾಂಗ್ರೆಸ್‌ 135, ಬಿಜೆಪಿ 65, ಜೆಡಿಎಸ್‌ 20 ಮುನ್ನಡೆ LIVE Updates

ಬಿಜೆಪಿಗೆ ಸೋಲು ಗೆಲುವು ಹೊಸದಲ್ಲ. ಎರಡು ಸ್ಥಾನದಿಂದ ಆರಂಭಿಸಿ ಸ್ವಂತ ಬಲದಿಂದ ಸರ್ಕಾರ ಮಾಡಿದ್ದೆವು. ಕಾರ್ಯಕರ್ತರು ಧೃತಿಗೆಡಬೇಕಿಲ್ಲ. ಅಭಿವೃದ್ಧಿ ಪರ ಆಡಳಿತ ಕೊಟ್ಟಿದ್ವಿ. ಆದರೂ ಸೋಲಾಗಿದೆ, ಪರಾಮರ್ಶೆ, ಆತ್ಮಾವಲೋಕನ ಮಾಡಿಕೊಳ್ಳುತ್ತೇವೆ. ರಾಜ್ಯದ ಜನತೆಗೆ ಧನ್ಯವಾದ ಹೇಳುತ್ತೇನೆ. ರಾಜ್ಯದ ಅಭಿವೃದ್ಧಿಗೆ ಸಹಕಾರ ಇರಲಿದೆ. ಕಾಂಗ್ರೆಸ್‍ನವರು ಮನೆಮನಗೆ ಹೋಗಿ ಗ್ಯಾರಂಟಿ ಕಾರ್ಡ್ ಕೊಟ್ಟಿದ್ದೀರಿ. ನಿಮ್ಮ ಭರವಸೆ ಈಡೇರಿಸಿ, ನಿಮ್ಮ ಕರ್ತವ್ಯ ಎಂದರು. ಇದನ್ನೂ ಓದಿ: ಬಿಜೆಪಿ ಸೋಲಿನ ಹೊಣೆಹೊತ್ತ ರಾಜ್ಯಾಧ್ಯಕ್ಷ ಕಟೀಲ್

Share This Article