ಬಿಎಸ್‍ವೈಗೆ ಜನ್ಮದಿನದ ಶುಭ ಕೋರಲು ನೂಕುನುಗ್ಗಲು – ಧವಳಗಿರಿ ಮನೆಯ ಗಾಜು ಪುಡಿಪುಡಿ

Public TV
1 Min Read

– ಕುಮಾರ್ ಬಂಗಾರಪ್ಪ ಬಿಜೆಪಿ ಸೇರೋದು ಕನ್ಫರ್ಮ್

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪಗೆ ಇಂದು 74ನೇ ಹುಟ್ಟುಹಬ್ಬದ ಸಂಭ್ರಮ. ಹೀಗಾಗಿ ಬೆಳಗ್ಗೆಯಿಂದಲೇ ಡಾಲರ್ಸ್ ಕಾಲೋನಿಯಲ್ಲಿರುವ ಬಿಎಸ್‍ವೈ ನಿವಾಸಕ್ಕೆ ಗಣ್ಯರ ದಂಡೇ ಹರಿದುಬರುತ್ತಿದೆ.

ಸಚಿವರಾದ ಸುರೇಶ್ ಕುಮಾರ್, ವಿ.ಸೋಮಣ್ಣ, ಸಂಸದ ಭಗವಂತ ಖೂಬಾ, ಮಾಜಿ ಸಚಿವ ಕುಮಾರ್ ಬಂಗಾರಪ್ಪ ಸೇರಿದಂತೆ ಹಲವರು ಬಿಎಸ್ ಯಡಿಯೂರಪ್ಪರನ್ನು ಭೇಟಿಯಾಗಿ ಶುಭಕೋರಿದ್ರು. ಇದೇ ವೇಳೆ ಬಿಎಸ್‍ವೈ ನಿವಾಸದ ಎದುರು ನೂಕುನುಗ್ಗಲು ಉಂಟಾಗಿದ್ದು, ನಿವಾಸದ ಹಾಲ್‍ನ ಗಾಜು ಪುಡಿ ಪುಡಿಯಾಗಿದೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಬಿಎಸ್‍ವೈ, ರಾಜ್ಯದಲ್ಲಿ ಮಳೆ ಬೆಳೆ ಚೆನ್ನಾಗಿ ಆಗಲಿ. ಕರ್ನಾಟಕವನ್ನು ಮಾದರಿ ರಾಜ್ಯವನ್ನಾಗಿ ಮಾಡಬೇಕು. ಅದಕ್ಕಾಗಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಬೇಕು ಅನ್ನೋ ಸಂಕಲ್ಪ ಮಾಡಿದ್ದೇನೆ. ಬರಗಾಲ ಹಿನ್ನೆಲೆಯಲ್ಲಿ ಅದ್ಧೂರಿ ಬರ್ತ್‍ಡೇ ಆಚರಣೆ ಬೇಡ ಎಂದಿದ್ದೇನೆ. ಜೊತೆಗೆ ಇಂದು ತುಮಕೂರಿನ ಬೆಳ್ಳಾವಿ ಕೆರೆ ಹೂಳೆತ್ತುವ ಕಾರ್ಯಕ್ಕೆ ಚಾಲನೆ ಕೊಡ್ತೀನಿ ಅಂತಾ ಹೇಳಿದ್ರು. ಬಳಿಕ ಯಡಿಯೂರಪ್ಪ ಶ್ರೀಗಳ ಆಶೀರ್ವಾದ ಪಡೆಯಲು ಸಿದ್ದಗಂಗಾ ಮಠಕ್ಕೆ ತೆರಳಿದ್ರು.

 

ಕುಮಾರ್ ಬಂಗಾರಪ್ಪ ಬಿಜೆಪಿಗೆ: ಬರ್ತ್‍ಡೇ ದಿನವೇ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್‍ವೈಗೆ ಭರ್ಜರಿ ಗಿಫ್ಟ್ ಸಿಕ್ಕಿದ್ದು, ಕುಮಾರ್ ಬಂಗಾರಪ್ಪ ಬಿಜೆಪಿ ಸೇರುವ ಇಂಗಿತ ವ್ಯಕ್ತಪಡಿಸಿದ್ದಾರೆ. ಇಂದು ಬಿಎಸ್‍ವೈ ಭೇಟಿಯಾಗಿ ಹುಟ್ಟುಹಬ್ಬದ ಶುಭಕೋರಿದ ಕುಮಾರ್ ಬಂಗಾರಪ್ಪ, ನಾವು ಬಿಎಸ್‍ವೈ ಜೊತೆಗಿದ್ದು ಶೀಘ್ರವೇ ಸುದ್ದಿಗೋಷ್ಠಿ ಕರೆದು ಅಧಿಕೃತವಾಗಿ ಪ್ರಕಟಿಸುತ್ತೇವೆ ಅಂತ ಹೇಳಿದ್ರು.

 

Share This Article
Leave a Comment

Leave a Reply

Your email address will not be published. Required fields are marked *