ನಾನು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲ್ಲ: ಮಾಯಾವತಿ

Public TV
1 Min Read

ಲಕ್ನೋ: ನಾನು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಬಹುಜನ ಸಮಾಜ ಪಕ್ಷದ (ಬಿಎಸ್‍ಪಿ) ನಾಯಕಿ ಮಾಯಾವತಿ ಸ್ಪಷ್ಟನೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಮಾಯಾವತಿ ಅವರು, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲವೆಂದು ನಿರ್ಧಾರ ಕೈಗೊಂಡಿದ್ದೇನೆ. ನನ್ನ ಈ ನಿರ್ಧಾರವನ್ನು ಪಕ್ಷದ ಕಾರ್ಯಕರ್ತರು ಅರ್ಥ ಮಾಡಿಕೊಳ್ಳುತ್ತಾರೆ ಎನ್ನುವ ವಿಶ್ವಾಸವಿದೆ. ಆದರೆ ಸ್ಪರ್ಧೆ ಅನಿವಾರ್ಯವಾದರೆ ಚುನಾವಣಾ ಕಣಕ್ಕೆ ಇಳಿಯುತ್ತೇನೆ ಎಂದು ತಿಳಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ ಮಾಯಾವತಿ ಅವರು ಕಾಂಗ್ರೆಸ್ ಜೊತೆಗೆ ಮೈತ್ರಿ ನಿರಾಕರಿಸಿದ್ದರು. ಹೀಗಾಗಿ ಸಮಾಜವಾದಿ ಪಕ್ಷದ ಜೊತೆಗೆ ಕೈಜೋಡಿಸಿದ್ದು, ಭರ್ಜರಿ ಪ್ರಚಾರ ಆರಂಭಿಸಿದ್ದಾರೆ. ಈಗಾಗಲೇ ಬಿಎಸ್‍ಪಿ-ಎಸ್‍ಪಿ ಸೀಟುಗಳ ಹಂಚಿಕೆ ಕೂಡ ಆಗಿದ್ದು, ಬಿಜೆಪಿಯನ್ನು ಸೋಲಿಸಲು ರಣತಂತ್ರ ರೂಪಿಸಲಾಗಿದೆ. ಬಿಜೆಪಿಯನ್ನು ಸೋಲಿಸಲು ಕಾಂಗ್ರೆಸ್‍ಗಿಂತ ಬಿಎಸ್‍ಪಿ-ಎಸ್‍ಪಿ ಮೈತ್ರಿ ಬಲಿಷ್ಠವಾಗಿದೆ ಎಂದು ಈ ಹಿಂದೆಯೇ ಮಾಯಾವತಿ ಹೇಳಿದ್ದರು. ಅಷ್ಟೇ ಅಲ್ಲದೆ ಕಾಂಗ್ರೆಸ್ ಜೊತೆಗೆ ಮೈತ್ರಿ ಇಲ್ಲದಿದ್ದರೂ ಉತ್ತರ ಪ್ರದೇಶದ ಅಮೇಠಿ ಹಾಗೂ ರಾಯ್‍ಬರೇಲಿ ಕ್ಷೇತ್ರಗಳನ್ನು ಕಾಂಗ್ರೆಸ್‍ಗೆ ಬಿಟ್ಟುಕೊಡಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *