ನಾನು ಹೇಳಿದ್ದು ನಿಜವಾಗಿದೆ, ಬೊಮ್ಮಾಯಿ ನಾಯಕತ್ವಕ್ಕೆ ಬೆಂಬಲ: ಬಿಎಸ್‌ವೈ

Public TV
1 Min Read

ಬೆಳಗಾವಿ: ವಿಧಾನ ಪರಿಷತ್ ಚುನಾವಣೆಯಲ್ಲಿ ಬಹುತೇಕ 12 ಕ್ಷೇತ್ರದಲ್ಲಿ ಬಿಜೆಪಿ ಗೆಲುವಿನ ಹಂತದಲ್ಲಿದೆ. ಈ ಬಗ್ಗೆ ನಾನು ಮೊದಲೇ ಹೇಳಿದ್ದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲೇ ನಾನು ಹೇಳಿದ ಹಾಗೆ 15 ಕ್ಷೇತ್ರದಲ್ಲಿ ಗೆಲುವು ಸಾಧಿಸುತ್ತೇವೆ. ಒಂದು ಕ್ಷೇತ್ರ ಹೆಚ್ಚು ಕಮ್ಮಿಯಾಗಿರಬಹುದು. ಆದರೂ ನಾನು ಹೇಳಿದ್ದು ನಿಜ ಆಗುತ್ತಿದೆ. ಅಲ್ಲದೆ ಈ ಗೆಲುವಿನಿಂದಾಗಿ ನಮಗೆ ಕಾರ್ಯಕಲಾಪ ನಡೆಸಲು ಸುಗಮ ಆಗುತ್ತದೆ ಎಂದರು.

ಈ ಚುನಾವಣೆ ಫಲಿತಾಂಶ ಮುಂದಿನ ಚುನಾವಣೆ ಮೇಲೆ ಪರಿಣಾಮ ಬೀರುತ್ತದೆ ಅಂತ ಅಲ್ಲ. ಮುಖ್ಯಮಂತ್ರಿ ಬೊಮ್ಮಾಯಿ ನಾಯಕತ್ವಕ್ಕೆ ಜನ ಬೆಂಬಲ ಕೊಟ್ಟಿದ್ದಾರೆ. ನಾನು ಮುಂದಿನ ದಿನಗಳಲ್ಲಿ ರಾಜ್ಯ ವ್ಯಾಪ್ತಿ ಪ್ರವಾಸ ಆರಂಭಿಸಿ ಪಕ್ಷ ಸಂಘಟನೆ ಮಾಡುತ್ತೇವೆ ಎಂದು ಭರವಸೆ ನೀಡಿದರು. ಇದನ್ನೂ ಓದಿ: 1,743 ಕೋಟಿ ಆಸ್ತಿಯ ಒಡೆಯ ಕೆಜಿಎಫ್‌ ಬಾಬುಗೆ ಸೋಲು

ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ 140 ಸ್ಥಾನ ಗೆಲುವು ಸಾಧಿಸುತ್ತೇವೆ. ಹೊಸ ಕ್ಷೇತ್ರಗಳಲ್ಲಿ ಬಿಜೆಪಿ ಹಿನ್ನಡೆಯಾಗಿದ್ದು ನಿಜ. ಆದರೆ ಹಾಸನ ಮಂಡ್ಯ ಸೇರಿದಂತೆ ಹಳೇ ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆಗೆ ಒತ್ತು ಕೊಡುತ್ತೆವೆ ಎಂದು ತಿಳಿಸಿದರು. ಇದನ್ನೂ ಓದಿ: ಒಳ್ಳೆಯ ಫಲಿತಾಂಶ ಬರುವ ನಿರೀಕ್ಷೆ ಇದೆ: ಬೊಮ್ಮಾಯಿ

Share This Article
Leave a Comment

Leave a Reply

Your email address will not be published. Required fields are marked *