22ರ ಹರೆಯದಲ್ಲಿ ಎಮ್ಮೆ ಕದ್ದವ 80ನೇ ವಯಸ್ಸಿನಲ್ಲಿ ಸಿಕ್ಕಿ ಬಿದ್ದ!

By
1 Min Read

ಬೀದರ್: 58 ವರ್ಷಗಳಿಂದ ಪೊಲೀಸರ (Police) ಕೈಗೇ ಸಿಗದೇ ನ್ಯಾಯಾಲಯಕ್ಕೂ (Court) ಹಾಜರಾಗದೇ ತಲೆ ಮರೆಸಿಕೊಂಡಿದ್ದ ಎಮ್ಮೆ ಕಳ್ಳನನ್ನು ಬೀದರ್ ಪೊಲೀಸರು (Bidar Police) ಬಂಧಿಸಿದ್ದಾರೆ.

ಮಹಾರಾಷ್ಟ್ರದ ಮೂಲದ ಕಿಶನ್ ಚಂದರ್ ಹಾಗೂ ಗಣಪತಿ ವಿಠಲ್ ವಾಗ್ಮೋರೆ 1965ರಲ್ಲಿ 2 ಎಮ್ಮೆ, 1 ಕರು ಕದ್ದಿದ್ದರು. ಎಮ್ಮೆ ಮಾಲೀಕ ಮರಳೀಧರಾವ್ ಕುಲಕರ್ಣಿ ಎಂಬುವರು ಭಾಲ್ಕಿಯ ಮಹಕರ್ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿದ ಪೊಲೀಸರು ಇಬ್ಬರನ್ನು ಬಂಧಿಸಿದ್ದರು. ಇದನ್ನೂ ಓದಿ: ಎಂಜಿನಿಯರ್‌ ಮಿದುಳು ನಿಷ್ಕ್ರಿಯ –ಬೆಂಗಳೂರಿನಿಂದ ತಮಿಳುನಾಡಿಗೆ ಜೀವಂತ ಹೃದಯ ರವಾನೆ

 

ಜಾಮೀನು ಸಿಕ್ಕಿದ ಬಳಿಕ ಇಬ್ಬರು ಕೋರ್ಟ್‌ಗೆ ಹಾಜರಾಗದೇ ತಲೆ ಮರೆಸಿಕೊಂಡಿದ್ದರು. ಸಮನ್ಸ್, ನೋಟಿಸ್, ವಾರೆಂಟ್ ನೀಡಿದ್ದರೂ ಆರೋಪಿಗಳು ಕ್ಯಾರೇ ಅಂದಿರಲಿಲ್ಲ. ಈ ಪೈಕಿ 2006 ರಲ್ಲಿ ಮೊದಲ ಆರೋಪಿ ಕಿಶನ್ ಚಂದರ್ ಮೃತ ಪಟ್ಟಿದ್ದು, ಈ ಪ್ರಕರಣದ ಎರಡನೇ ಆರೋಪಿ ಪತ್ತೆಗಾಗಿ ಎಸ್‌ಪಿ ಚೆನ್ನಬಸವಣ್ಣ ಲಂಗೋಟಿ ವಿಶೇಷ ತಂಡ ರಚನೆ ಮಾಡಿದ್ದರು.

ಈಗ ಮಹಾರಾಷ್ಟ್ರದ ಲಾತೂರಿನ ಟಾಕಳಗಾಂವ್ ಗ್ರಾಮದಲ್ಲಿ ಬೀದರ್ ಪೊಲೀಸರು ಎರಡನೇ ಆರೋಪಿ ಗಣಪತಿ ವಿಠಲ್ ವಾಗ್ಮೋರೆಯನ್ನು ಬಂಧಿಸಿದ್ದಾರೆ.

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್