ಉಡುಪಿಯಲ್ಲಿ ದುಷ್ಕರ್ಮಿಗಳಿಂದ ಬಸ್ ನಿರ್ವಾಹಕನ ಕಗ್ಗೊಲೆ

Public TV
1 Min Read

ಉಡುಪಿ: ಬಸ್ ನಿರ್ವಾಹಕನನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿದ ಘಟನೆ ಉಡುಪಿ ತಾಲೂಕಿನ ಪೆರ್ಡೂರು ಸಮೀಪ ಬೈರಂಪಳ್ಳಿಯಲ್ಲಿ ಈ ದುರ್ಘಟನೆ ನಡೆದಿದೆ.

ಪ್ರಶಾಂತ್ ಪೂಜಾರಿ (35) ಕೊಲೆಯಾದ ಬಸ್ ನಿರ್ವಾಹಕ. ಪ್ರಶಾಂತ್ ಪೂಜಾರಿ ದುಷ್ಕರ್ಮಿಗಳ ದಾಳಿಗೆ ತೀವ್ರ ಗಾಯಗೊಂಡು ಮೃತಪಟ್ಟಿದ್ದಾರೆ. ಗುರುವಾರ ರಾತ್ರಿ 12 ಗಂಟೆಗೆ ಸಂತೋಷ್ ಪೂಜಾರಿ ಅವರ ಮನೆಗೆ ಇಬ್ಬರು ದುಷ್ಕರ್ಮಿಗಳು ಬಂದಿದ್ದರು. ವ್ಯವಹಾರ ವಿಚಾರದಲ್ಲಿ ಮೂವರ ನಡುವೆ ರಾತ್ರಿ 12 ಗಂಟೆಯವರೆಗೆ ಮಾತುಕತೆ ನಡೆದಿತ್ತು.

ಈ ವೇಳೆ ಮಾತಿಗೆ ಮಾತು ಬೆಳೆದು ಜಟಾಪಟಿ ನಡೆದಿದೆ. ಇಬ್ಬರು ಅಪರಿಚಿತರು ಪ್ರಶಾಂತ್ ಪೂಜಾರಿ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿದ್ದಾರೆ ಎಂದು ಮೇಲ್ನೋಟಕ್ಕೆ ಕಂಡು ಬರುತ್ತದೆ. ಸಿಟಿ ಬಸ್ ಪರ್ಮಿಟ್ ಪಡೆದಿದ್ದ ಸಂತೋಷ್ ಅದೇ ಬಸ್ಸಲ್ಲಿ ಕಂಡಕ್ಟರ್ ಆಗಿ ಕೂಡ ಕೆಲಸ ಮಾಡುತ್ತಿದ್ದರು. ಹಿರಿಯಡ್ಕ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೃತದೇಹವನ್ನು ಮಣಿಪಾಲ ಕೆಎಂಸಿಯಲ್ಲಿ ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿದೆ. ಮೃತ ಸಂತೋಷ್ ಪೂಜಾರಿ ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲೂ ಕೂಡ ಶಾಮೀಲಾಗಿದ್ದ ಎಂಬ ಬಗ್ಗೆ ಪೊಲೀಸರಿಗೆ ಮಾಹಿತಿ ಇದೆ. ಬಸ್ಸಿನ ವ್ಯವಹಾರ ವಿಚಾರದಲ್ಲಿ ಇಬ್ಬರ ಜೊತೆ ವಾಗ್ವಾದ ನಡೆದಿತ್ತು ಎನ್ನಲಾಗಿದೆ. ಈ ಎಲ್ಲಾ ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *