– ಕಚೇರಿಯಲ್ಲಿದ್ದ ಡೈರಿ ವಶಕ್ಕೆ ಪಡೆದಿರೋ ಪೊಲೀಸರು
ಬೆಂಗಳೂರು: ಉದ್ಯಮಿ ಸಿಜೆ ರಾಯ್ (CJ Roy) ಆತ್ಮಹತ್ಯೆಗೂ ಮುನ್ನ ಯಾರ ಜೊತೆಯಾದ್ರೂ ಮಾತನಾಡಿದ್ರಾ? ಅಥವಾ ಯಾರಿಗಾದರೂ ಮೆಸೇಜ್ ಕಳುಹಿಸಿದ್ರಾ? ಎಂದು ಪೊಲೀಸರು ಪರಿಶೀಲನೆ ನಡೆಸುತ್ತಿದ್ದು, ಮೊಬೈಲ್ನ್ನು ಸಿಐಟಿ ಸೈಬರ್ ಸೆಲ್ಗೆ ರಿಕವರಿಗಾಗಿ ಕಳುಹಿಸಿದ್ದಾರೆ.
ಕಾನ್ಫಿಡೆಂಟ್ ಗ್ರೂಪ್ ಮ್ಯಾನೇಜಿಂಗ್ ಡೈರೆಕ್ಟರ್ ದೂರಿನಲ್ಲಿ ತಿಳಿಸಿರುವಂತೆ ಆತ್ಮಹತ್ಯೆಗೂ ಮುನ್ನ ತಾಯಿ ಜೊತೆ ಮಾತನಾಡಬೇಕೆಂದು ರಾಯ್ ತಿಳಿಸಿದ್ದರು. ಜೊತೆಗೆ ಗನ್ಮ್ಯಾನ್ ಬಳಿ ಯಾರಿಗೂ ಒಳಗೆ ಬಿಡದಂತೆ ಹೇಳಿದ್ದರು. ಅದರಂತೆ ಆತ್ಮಹತ್ಯೆಗೂ ಮುನ್ನ ನಿಜಕ್ಕೂ ತಾಯಿ ಜೊತೆಗೆ ಮಾತನಾಡಿದ್ರಾ? ಅಥವಾ ಬೇರೆ ಇನ್ಯಾರ ಜೊತೆಯಾದ್ರೂ ಮಾತನಾಡಿದ್ರಾ? ಅಥವಾ ಮೆಸೇಜ್ ಕಳಿಸದ್ದಾರಾ? ಎಂಬ ಕೆಲ ಅನುಮಾನಗಳು ವ್ಯಕ್ತವಾಗಿದ್ದು, ಐಫೋನ್ ಮತ್ತು ಆ್ಯಂಡ್ರಾಯ್ಡ್ ಫೋನ್ಗಳನ್ನು ಪೊಲೀಸರ ವಶಕ್ಕೆ ಪಡೆದು, ಸಿಐಡಿಗೆ ರವಾನಿಸಿದ್ದಾರೆ. ಇದನ್ನೂ ಓದಿ: ಸಿ.ಜೆ ರಾಯ್ ಇಚ್ಛೆಯಂತೆ ಬನ್ನೇರುಘಟ್ಟದ ಕಾಸಾಗ್ರ್ಯಾಂಡ್ನಲ್ಲಿ ನಡೆಯಲಿರುವ ಅಂತ್ಯಕ್ರಿಯೆ
ಎರಡು ಫೋನ್ಗೆ ಪಾಸ್ವಾರ್ಡ್ ಇರುವ ಕಾರಣ ಕೋರ್ಟ್ ಅನುಮತಿ ಪಡೆದು ಎಫ್ಎಸ್ಎಲ್ಗೆ ರವಾನೆ ಮಾಡಬೇಕು. ಹೀಗಾಗಿ ಸದ್ಯ ಸಿಐಡಿ ಸೈಬರ್ ಸೆಲ್ಗೆ ಮೊಬೈಲ್ನ್ನು ರವಾನೆ ಮಾಡಿದ್ದು, ಮೊಬೈಲ್ನಲ್ಲಿ ಇರುವ ಮಾಹಿತಿ ರಿಕವರಿ ಮಾಡಲಿದ್ದಾರೆ.
ಇನ್ನೂ ನಿನ್ನೆ (ಜ.31) ರಾತ್ರಿ ಕಾನ್ಫಿಡೆಂಟ್ ಕಚೇರಿಯಲ್ಲಿದ್ದ ರಾಯ್ ಅವರ ಡೈರಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಡೈರಿಯಲ್ಲಿ ಕೆಲ ನಟಿಯರು, ಮಾಡೆಲ್ ಹಾಗೂ ರಾಜಕಾರಣಿಗಳ ಹೆಸರುಗಳು ಪತ್ತೆಯಾಗಿದ್ದು, ಯಾವ ಕಾರಣಕ್ಕಾಗಿ ಬರೆದಿದ್ದಾರೆ. ಬರೀ ಈವೆಂಟ್ ವಿಚಾರಕ್ಕಾ? ಅಥವಾ ಬೇರೆ ವಿಷಯಾ ಇದೆಯಾ? ಎಂದು ಪೊಲೀಸರು ಇಂಚಿಂಚೂ ತನಿಖೆ ನಡೆಸುತ್ತಿದ್ದಾರೆ.ಇದನ್ನೂ ಓದಿ: ಯಾವುದೇ ಸಾಲವಿಲ್ಲ, ಶತ್ರುಗಳಿಲ್ಲ.. ಐಟಿ ಅಧಿಕಾರಿಗಳ ಒತ್ತಡ ಇತ್ತು: ಸಿಜೆ ರಾಯ್ ಬಗ್ಗೆ ಸಹೋದರ ಮಾತು

