ಉಡುಪಿಯಲ್ಲಿ ಹಾಡಹಗಲೇ ಉದ್ಯಮಿಯ ಬರ್ಬರ ಹತ್ಯೆ

Public TV
1 Min Read

ಉಡುಪಿ: ಹಾಡಹಗಲೇ ಉದ್ಯಮಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಗರದ ಪೆರಂಪಳ್ಳಿ ಸಮೀಪದ ಪಬ್‍ನಲ್ಲಿ ನಡೆದಿದೆ.

ಗುರುಪ್ರಸಾದ್ ಭಟ್(46) ಕೊಲೆಯಾದ ಉದ್ಯಮಿಯಾಗಿದ್ದಾರೆ. ಇಂದು ಮಧ್ಯಾಹ್ನ 2 ಗಂಟೆ ಸುಮಾರಿನಲ್ಲಿ ಕಾರಿನಲ್ಲಿ ಬಂದಿದ್ದ ಮೂವರು ದುಷ್ಕರ್ಮಿಗಳು ಪಬ್ ನಲ್ಲಿದ್ದ ಗುರುಪ್ರಸಾದ್ ರೊಂದಿಗೆ ಗಲಾಟೆ ನಡೆಸಿದ್ದಾರೆ. ಈ ವೇಳೆ ಏಕಾಏಕಿ ಅವರ ಮೇಲೆ ಚಾಕುವಿನಿಂದ ಮನಬಂದಂತೆ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಗಾಯಗೊಂಡ ಗುರುಪ್ರಸಾದ್ ರವರನ್ನು ಸ್ಥಳೀಯರು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆಯೇ ಮೃತಪಟ್ಟಿದ್ದಾರೆ.

ಮೃತ ಗುರುಪ್ರಸಾದ್ ನಗರದಲ್ಲಿ ಹಲವು ದಿನಗಳಿಂದ ಪಬ್ ಹಾಗೂ ಮರದ ಕೆತ್ತನೆ ಉದ್ಯಮ ನಡೆಸುತ್ತಿದ್ದರು. ಉದ್ಯಮದ ಪೈಪೋಟಿ ಹಾಗೂ ಹಣಕಾಸಿನ ಹಿನ್ನೆಲೆಯಲ್ಲಿ ಕೊಲೆ ನಡೆದಿರಬಹುದೆಂದು ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದಾರೆ. ಘಟನೆ ಸಂಬಂಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *