ಬೆಳಗಾವಿಯಲ್ಲಿ ಉದ್ಯಮಿ ಕೊಲೆ ಪ್ರಕರಣ – 6 ದಿನಗಳ ಬಳಿಕ ಮೃತದೇಹ ಪತ್ತೆ

Public TV
2 Min Read

ಬೆಳಗಾವಿ: ಜಿಲ್ಲೆಯ ಗೋಕಾಕ್‌ನಲ್ಲಿ (Gokak) ಕೊಲೆಯಾದ (Murder) ಉದ್ಯಮಿ (Businessman) ರಾಜು ಝಂವರ ಅವರ ಮೃತದೇಹ 6 ದಿನಗಳ ಬಳಿಕ ಪತ್ತೆಯಾಗಿದೆ.

ಗೋಕಾಕ್ ನಗರದ ರಾಜು ಝಂವರ ಮೃತದೇಹಕ್ಕಾಗಿ ಮೆಗಾ ಸರ್ಚ್ ಆಪರೇಷನ್ ಕೈಗೊಳ್ಳಲಾಗಿತ್ತು. 2 ಜಿಲ್ಲೆಗಳ 350 ಪೊಲೀಸರಿಂದ ಶವ ಪತ್ತೆ ಕಾರ್ಯ ನಡೆದಿತ್ತು. ಗುರುವಾರ ಸಂಜೆ 8:30ರ ಸುಮಾರಿಗೆ ಪಂಚನಾಯಕನಟ್ಟಿ ಬಳಿ ಘಟಪ್ರಭಾ ಬಲದಂಡೆ ಕಾಲುವೆಯಲ್ಲಿ ಶವ ಪತ್ತೆಯಾಗಿದ್ದು ಬೆಳಗಾವಿ, ಬಾಗಲಕೋಟೆ ಜಿಲ್ಲಾ ಪೊಲೀಸರ ಜಂಟಿ ಕಾರ್ಯಾಚರಣೆ ಯಶಸ್ವಿಯಾಗಿದೆ.

ಪ್ರಕರಣ ಹಿನ್ನೆಲೆ:
ಫೆಬ್ರವರಿ 10ರ ರಾತ್ರಿ ಗೋಕಾಕ್ ನಗರದಿಂದ ಉದ್ಯಮಿ ರಾಜು ಝಂವರ ನಾಪತ್ತೆ ಆಗಿದ್ದರು. ಈ ವೇಳೆ ಗೋಕಾಕ್ ಸಿಟಿ ಆಸ್ಪತ್ರೆ ಬಳಿ ರಾಜು ಝಂವರ ದ್ವಿಚಕ್ರ ವಾಹನ ಪತ್ತೆಯಾಗಿತ್ತು. ಆಗ ಆಸ್ಪತ್ರೆ ವೈದ್ಯ ಡಾ. ಸಚಿನ್ ಶಿರಗಾವಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿತ್ತು. ಈ ವೇಳೆ ಸುಪಾರಿ ನೀಡಿ ಹತ್ಯೆ ಮಾಡಿಸಿದ್ದಾಗಿ ಡಾ. ಸಚಿನ್ ಶಿರಗಾವಿ ಮಾಹಿತಿ ನೀಡಿದ್ದರು. ಇದನ್ನೂ ಓದಿ: ಗೆಳೆಯನ ಶವವನ್ನು ರಸ್ತೆ ಬದಿಯಲ್ಲೇ ಬಿಟ್ಟು ಹೋದ ವ್ಯಾಪಾರಿಗಳು

ಗೋಕಾಕ್‌ನ ಯೋಗಿಕೊಳ್ಳ ಮಾರ್ಗದಲ್ಲಿ ಮಾರ್ಕಂಡೇಯ ನದಿ ದಡದಲ್ಲಿ ಹರಿತವಾದ ಆಯುಧದಿಂದ ಹಲ್ಲೆಗೈದು ರಾಜು ಅವರನ್ನು ಕೊಲೆ ಮಾಡಲಾಗಿತ್ತು. ಬಳಿಕ ದುಷ್ಕರ್ಮಿಗಳು ಕಾರಿನಲ್ಲಿ ಮೃತದೇಹ ತಂದು ಕೊಳವಿ ಬಳಿ ಕಾಲುವೆಗೆ ಎಸೆದು ಪರಾರಿಯಾಗಿದ್ದರು. ಘಟಪ್ರಭಾ ಬಲದಂಡೆ ಕಾಲುವೆಗೆ ಮೃತದೇಹವನ್ನು ಎಸೆಯಲಾಗಿದ್ದು, ನದಿ ದಡದಲ್ಲಿ ರಕ್ತದ ಕಲೆ, ಮುರಿದ ಕನ್ನಡಕ, ಪೆನ್ ಪತ್ತೆಯಾಗಿತ್ತು. ಆರೋಪಿ ವೈದ್ಯನ ಮಾಹಿತಿ ಮೇರೆಗೆ ಕೊಳವಿ ಗ್ರಾಮದಿಂದ 37 ಕಿಮೀ ದೂರದ ಕಾಲುವೆಯಲ್ಲಿ ಶೋಧ ಕಾರ್ಯ ನಡೆಸಲಾಗಿತ್ತು.

CRIME

ಬೆಳಗಾವಿ ಜಿಲ್ಲೆಯ 3 ಡಿವೈಎಸ್‌ಪಿ, 8 ಇನ್ಸ್ಪೆಕ್ಟರ್, ಬಾಗಲಕೋಟೆ ಎಎಸ್‌ಪಿ ಸೇರಿ 350ಕ್ಕೂ ಹೆಚ್ಚು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು. ಐವರು ಆರೋಪಿಗಳ ಪೈಕಿ ಮೂವರ ಬಂಧನವಾಗಿದ್ದು ಇನ್ನೂ ಇಬ್ಬರಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ಗೋಕಾಕ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಉಕ್ರೇನ್ ಯುದ್ಧದಲ್ಲಿ ಮಡಿದ ಮಗನ ಹೆಸರಲ್ಲಿ ಮನೆ ನಿರ್ಮಿಸಿದ ತಂದೆ-ತಾಯಿ

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *