ಹೆಚ್‍ಡಿಕೆ ಅಧಿಕಾರಿಗಳ ವಿರುದ್ಧ ಸೇಡು ತೀರಿಸಿಕೊಳ್ಳಲು ಹೊರಟಿದ್ದಾರೆ: ಬಿ.ವೈ.ವಿಜಯೇಂದ್ರ

Public TV
1 Min Read

ಹಾಸನ: ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸರ್ಕಾರದ ಅವಧಿಯಲ್ಲಿ ಫೋನ್ ಕದ್ದಾಲಿಕೆ ಆರೋಪ ಕೇಳಿ ಬಂದಿದ್ದು, ಈ ಹಿನ್ನೆಲೆಯಲ್ಲಿ ಮಂಗಳೂರು ಗಲಭೆ ವಿಚಾರವಾಗಿ ಸಿಡಿ ಬಿಡುಗಡೆ ಮಾಡಿ ಅಧಿಕಾರಿಗಳ ವಿರುದ್ಧ ಸೇಡು ತೀರಿಸಿಕೊಳ್ಳಲು ಹೊರಟಿದ್ದಾರೆ ಎಂದು ಸಿಎಂ ಪುತ್ರ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ.

ಹಾಸನದ ಅರಸೀಕೆರೆಯಲ್ಲಿ ಮಾತನಾಡಿದ ಬಿ.ವೈ.ವಿಜಯೇಂದ್ರ, ಮಾಜಿ ಸಿಎಂ ಕುಮಾರಸ್ವಾಮಿಯವರ ಸರ್ಕಾರದ ಅವಧಿಯಲ್ಲಿ ಪೋನ್ ಕದ್ದಾಲಿಕೆ ಆರೋಪಗಳು ಕೇಳಿ ಬಂದಿವೆ. ಹಾಗಾಗಿ ಮಾಜಿ ಸಿಎಂ ಅದನ್ನು ಮುಂದಿಟ್ಟುಕೊಂಡು ಅಧಿಕಾರಿಗಳ ವಿರುದ್ಧ ಸೇಡು ತಿರಿಸಿಕೊಳ್ಳೊಕೆ ಹೊರಟಂತಿದೆ. ಈ ಮೂಲಕ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಹೊರಟಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಸಂಪುಟ ವಿಸ್ತರಣೆಯನ್ನು ಸಂಕ್ರಾಂತಿ ನಂತರ ಮಾಡಲಾಗುತ್ತದೆ. ಪೌರತ್ವ ಕಾಯ್ದೆ ವಿರೋಧಿಸುವವರ ವಿರುದ್ಧ ಅಸಮಾಧಾನ ಹೊರಹಾಕಿದ ವಿಜಯೇಂದ್ರ, ಪೌರತ್ವದ ಕಾಯ್ದೆ ತಿದ್ದುಪಡಿ ವಿಷಯ ಇಟ್ಟುಕೊಂಡು ವಿರೋಧ ಪಕ್ಷಗಳು ತಮ್ಮ ಬೇಳೆ ಬೇಯಿಸಿಕೊಳ್ಳಲು ಹೊರಟಿವೆ. ಎಲ್ಲರು ಪೌರತ್ವ ಕಾಯ್ದೆ ಒಪ್ಪಿಕೊಳ್ಳಬೇಕು ಎಂದು ಮನವಿ ಮಾಡಿದರು.

Share This Article
Leave a Comment

Leave a Reply

Your email address will not be published. Required fields are marked *