– ರಾಜ್ಯಾಧ್ಯಕ್ಷರ ಹುದ್ದೆ ಕುರಿತು ಪಕ್ಷದಿಂದ ಸದ್ಯದಲ್ಲೇ ನಿರ್ಧಾರ
ಬೆಂಗಳೂರು: ತಮ್ಮ ತಪ್ಪು ಅರಿವಾದರೆ ಯಾರೇ ಆದರೂ ಸಹ ಪಕ್ಷಕ್ಕೆ ಮರಳಬಹುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (B Y Vijayendra) ಮುಕ್ತ ಆಹ್ವಾನ ನೀಡಿದ್ದಾರೆ.
ಬೆಂಗಳೂರಿನಲ್ಲಿ (Bengaluru) ಮಾತನಾಡಿದ ಅವರು, ಈಶ್ವರಪ್ಪ (Eshwarappa) ಘರ್ ವಾಪ್ಸಿ ಬಗ್ಗೆ ಪಕ್ಷದ ವೇದಿಕೆಯಲ್ಲಿ ಚರ್ಚೆಯಾಗಿಲ್ಲ. ಇದೆಲ್ಲಾ ಕೇಂದ್ರದ ಮಟ್ಟದಲ್ಲಿ ಚರ್ಚೆ ಆಗುವ ವಿಚಾರ. ನಮ್ಮ ಹಂತದಲ್ಲಿ ಚರ್ಚೆ ಆಗಲ್ಲ. ಆದ್ರೆ ಯಾರ್ಯಾರು ತಮ್ಮ ತಪ್ಪನ್ನು ಅರ್ಥ ಮಾಡಿಕೊಂಡು ವಾಪಸ್ ಬರಬೇಕು ಅನ್ಕೊಂಡಿದ್ದಾರೋ ಅವರು ಬರಬಹುದು ಎಂದು ಹೇಳಿದ್ದಾರೆ. ಇದನ್ನೂ ಓದಿ: ಆರ್ಟಿಐಯಡಿ ಸಲ್ಲಿಸಿದ ಅರ್ಜಿಯನ್ನು ಉಡಾಫೆ ಮಾಡಬೇಡಿ – ಕೆ. ಬದ್ರುದ್ದೀನ್ ಎಚ್ಚರಿಕೆ
ನಾನು ಮತ್ತು ಪಕ್ಷದ ಕೆಲವು ಹಿರಿಯ ಮುಖಂಡರು ನಿನ್ನೆ ಕೇಂದ್ರ ಗೃಹ ಸಚಿವ ಮತ್ತು ಪಕ್ಷದ ಮಾರ್ಗದರ್ಶಕರಾದ ಅಮಿತ್ ಶಾ ಜೀ ಅವರನ್ನು ಭೇಟಿ ಮಾಡಿದ್ದೇವೆ. ಸುಮಾರು 20-25 ನಿಮಿಷಗಳ ಕಾಲ ಸುದೀರ್ಘವಾಗಿ ರಾಜ್ಯ ರಾಜಕಾರಣ, ಪ್ರಚಲಿತ ವಿದ್ಯಮಾನಗಳ ಕುರಿತು ಚರ್ಚಿಸಿದ್ದೇವೆ ಎಂದು ವಿವರಿಸಿದ್ದಾರೆ. ಇದನ್ನೂ ಓದಿ: 10 ಅಡಿ ಆಳದಲ್ಲಿ ಸೊಸೆಯನ್ನು ಹೂತಿದ್ದ ಪಾಪಿಗಳು – ಓಡಿ ಹೋಗಿದ್ದಾಳೆ ಎಂದು ಕತೆ ಕಟ್ಟಿದ್ದ ಪತಿ ಕುಟುಂಬಸ್ಥರು ಅರೆಸ್ಟ್!
ಕಾಂಗ್ರೆಸ್ ಸರಕಾರವು ಆಡಳಿತಕ್ಕೆ ಬಂದಾಗಿನಿಂದ ಒಡೆದಾಳುವ ನೀತಿ ಅನುಸರಿಸುತ್ತಿದೆ. ಸರಕಾರವು ರಾಜ್ಯದ ಬಡವರು, ರೈತರಿಗೆ ಶಾಪವಾಗಿ ಪರಿಣಮಿಸಿದ ಕುರಿತು ಚರ್ಚೆ ಮಾಡಿದ್ದೇವೆ. ಅವರು ಸಮಾಧಾನದಿಂದ ಆಲಿಸಿದ್ದಾರೆ. ಪಕ್ಷಕ್ಕೆ ಮುಂದಿನ ದಿನಗಳಲ್ಲಿ ಉತ್ತಮ ಅವಕಾಶವಿದೆ. ಎಲ್ಲರೂ ವ್ಯತ್ಯಾಸಗಳನ್ನು ಮರೆತು ಒಟ್ಟಾಗಿ-ಒಂದಾಗಿ ಹೋಗಬೇಕೆಂದು ತಿಳಿಸಿದ್ದಾರೆ. ಆಗ ಮಾತ್ರ ಕಾರ್ಯಕರ್ತರಿಗೆ ಗೌರವ ಕೊಟ್ಟಂತಾಗುತ್ತದೆ. ಜನರು ನಮ್ಮಲ್ಲಿ ವಿಶ್ವಾಸ ಇಡುತ್ತಾರೆ ಎಂದು ಅವರು ಕಿವಿಮಾತನ್ನು ಹೇಳಿದ್ದಾಗಿ ವಿಜಯೇಂದ್ರ ತಿಳಿಸಿದ್ದಾರೆ. ಇದನ್ನೂ ಓದಿ: ಸದ್ಯಕ್ಕೆ ನಾನು ಬಿಜೆಪಿಗೆ ಮರಳುವುದಿಲ್ಲ: ಈಶ್ವರಪ್ಪ
ಪ್ರಜಾಪ್ರಭುತ್ವದಲ್ಲಿ ಆಡಳಿತ ಪಕ್ಷಕ್ಕೆ ಎಷ್ಟು ಜವಾಬ್ದಾರಿ ಇದೆಯೋ ಅದಕ್ಕಿಂತ ಹೆಚ್ಚಿನ ಹೊಣೆಗಾರಿಕೆಯು ವಿಪಕ್ಷಕ್ಕೂ ಇದೆ. ರಾಜ್ಯ ಸರಕಾರದ ಈಗಿನ ಕಾರ್ಯವೈಖರಿ, ಕಾಂಗ್ರೆಸ್ ಸರಕಾರದ ಕರಾಳ ಮುಖವನ್ನು ಜನರ ಮುಂದೆ ಅನಾವರಣಗೊಸುವ ಕೆಲಸವನ್ನು ನಾವು ವಿಪಕ್ಷವಾಗಿ ಮಾಡುತ್ತ ಬಂದಿದ್ದೇವೆ. ಇದೆಲ್ಲವನ್ನೂ ವಿವರಿಸಿದ್ದು, ಅಮಿತ್ ಶಾ ಜೀ ಅವರು ಸಂತೋಷ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಇರಾನ್ ಪರ ನಿಲ್ಲಿ: ಕೇಂದ್ರ ಸರ್ಕಾರಕ್ಕೆ ಸಿದ್ದರಾಮಯ್ಯ ಒತ್ತಾಯ
ಮುಂದಿನ ರಾಜ್ಯಾಧ್ಯಕ್ಷರಾಗಿ ಮುಂದುವರೆಯುವ ವಿಶ್ವಾಸ ಇದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಪಕ್ಷ ಕೊಟ್ಟ ಎಲ್ಲಾ ಜವಾಬ್ದಾರಿಯನ್ನು ಶ್ರದ್ಧೆಯಿಂದ ನಿರ್ವಹಿಸ್ತಿದ್ದೇನೆ. ಪ್ರತಿ ಸಂದರ್ಭದಲ್ಲೂ ಹೈಕಮಾಂಡ್ಗೆ ಮಾಹಿತಿ ಕೊಡ್ತಾ ಬಂದಿದ್ದೇನೆ. ವರಿಷ್ಠರ ತೀರ್ಮಾನ ಏನಿರುತ್ತದೆ ಎಂದು ಕಾದು ನೋಡಬೇಕು. ನಮ್ಮದು ರಾಷ್ಟ್ರೀಯ ಪಕ್ಷ. ಎಲ್ಲ ಜಿಲ್ಲಾಧ್ಯಕ್ಷರ ಅಭಿಪ್ರಾಯ ಪಡೆದು, ಪಕ್ಷದ ಮುಖಂಡರ ಅಭಿಮತ ಪಡೆದುಕೊಂಡು ಅಂತಿಮವಾಗಿ ಯಾರನ್ನು ಮಾಡಿದರೆ ಒಳ್ಳೆಯದು ಎಂಬ ಕುರಿತು ಅಂತಿಮ ನಿರ್ಧಾರ ಸದ್ಯವೇ ಆಗುವ ವಿಶ್ವಾಸವಿದೆ ಎಂದಿದ್ದಾರೆ.