ಬೆಂಗಳೂರು: ಉಪಚುನಾವಣೆಗೆ (By Elections) ಯುಗಾದಿ ಹಬ್ಬದಂದೇ ಬಿಜೆಪಿ (BJP) ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ.
ಬಾಗಲಕೋಟೆ ಕ್ಷೇತ್ರಕ್ಕೆ ವೀರಣ್ಣ ಚರಂತಿಮಠ, ದಾವಣಗೆರೆ ದಕ್ಷಿಣಕ್ಕೆ ಶ್ರೀನಿವಾಸ ಟಿ ದಾಸಕರಿಯಪ್ಪ ಅವರನ್ನು ಅಭ್ಯರ್ಥಿಗಳಾಗಿ ಬಿಜೆಪಿ ಘೋಷಿಸಿದೆ. ದಾವಣಗೆರೆ ರೆಬೆಲ್ ಬಣದ ಅಭ್ಯರ್ಥಿಗೆ ಬಿಜೆಪಿ ಮಣೆ ಹಾಕಿದೆ. ಇದನ್ನೂ ಓದಿ: ಉಪಚುನಾವಣೆ| ಸಿಎಂ ಕಚೇರಿಯಲ್ಲಿ ಸಂಧಾನ ಸಭೆಗೆ ವ್ಯಾಪಕ ಟೀಕೆ
ದಾವಣಗೆರೆ ದಕ್ಷಿಣದಲ್ಲಿ ಜಾತಿ ಲೆಕ್ಕಾಚಾರದಲ್ಲಿ ತಂತ್ರವನ್ನು ಬಿಜೆಪಿ ಹೆಣೆದಿದೆ. ಎಸ್ಟಿ ಸಮುದಾಯದ ಟಿ.ಶ್ರೀನಿವಾಸದಾಸ ಕರಿಯಪ್ಪಗೆ ಟಿಕೆಟ್ ನೀಡಿದೆ. ಈ ಮೂಲಕ ಅಹಿಂದ ಮತ್ತು ಲಿಂಗಾಯತ ವರ್ಗದ ಮತಗಳ ಮೇಲೆ ಪಕ್ಷ ಕಣ್ಣಿಟ್ಟಿದೆ. ದಾವಣಗೆರೆ ಬಿಜೆಪಿ ಮನೆಯೊಂದು ಮೂರು ಬಾಗಿಲಾಗಿತ್ತು. ಯಾವಾಗ ನ್ಯೂಟ್ರಲ್ ಅಭ್ಯರ್ಥಿ ಚರ್ಚೆ ಮುನ್ನೆಲೆಗೆ ಬಂತೋ ಆಗ ಸಿದ್ದೇಶ್ವರ್ – ರೇಣುಕಾಚಾರ್ಯ ಬಣಗಳಿಂತ ಒಗ್ಗಟ್ಟಿನ ಜಪ ಮಾಡಲಾಗಿತ್ತು.
ಯಾರಿಗೇ ಟಿಕೆಟ್ ಕೊಟ್ರೂ ಕೆಲಸ ಮಾಡೋದಾಗಿ ಎರಡೂ ಬಣಗಳಿಂದ ಘೋಷಣೆ ಮಾಡಲಾಗಿದೆ. ಹೀಗಾಗಿ, ಸಿದ್ದೇಶ್ವರ್ ಬಣದಲ್ಲಿ ಹೆಚ್ಚು ಗುರುತಿಸಿಕೊಂಡಿದ್ದರೂ ರೇಣುಕಾಚಾರ್ಯ ಬಣದ ಜತೆಗೂ ಉತ್ತಮ ಬಾಂಧವ್ಯ ಇಟ್ಟುಕೊಂಡ ಶ್ರೀನಿವಾಸ ದಾಸಕರಿಯಪ್ಪಗೆ ಟಿಕೆಟ್ ಒಲಿದು ಬಂದಿದೆ. ಇದನ್ನೂ ಓದಿ: ದಾವಣಗೆರೆ ದಕ್ಷಿಣ ಉಪಚುನಾವಣೆ | ಕಾಂಗ್ರೆಸ್ ಸಭೆಯಲ್ಲಿ ಗದ್ದಲ – ಬೇಸರದಿಂದ ಹೊರನಡೆದ ಉಸ್ತುವಾರಿ ಸಮಿತಿ ಸದಸ್ಯರು

