ಸಚಿವ ಬೈರತಿ ಬಸವರಾಜ್‍ಗೆ ಪಿತೃವಿಯೋಗ

Public TV
1 Min Read

ಬೆಂಗಳೂರು: ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಅವರ ತಂದೆ ಭೈರತಿ ಅಂಜಿನಪ್ಪ ಅವರು ಇಂದು ನಿಧನರಾಗಿದ್ದಾರೆ.

ಬೈರತಿ ಬಸವರಾಜ ಅವರ ತಂದೆ ಬೈರತಿ ಅಂಜಿನಪ್ಪ(85) ಅವರು ಕೃಷಿಕರಾಗಿದ್ದರು. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ನಿಧನರಾಗಿದ್ದಾರೆ. ಮೃತರಿಗೆ ಐವರು ಪುತ್ರರು ಮೂವರು ಪುತ್ರಿಯರಿದ್ದು, ಈ ಪೈಕಿ ಬೈರತಿ ಬಸವರಾಜ್ ಹಿರಿಯ ಮಗ. ಇದನ್ನೂ ಓದಿ: ಗಾಂಧೀಜಿ ಕಾಂಗ್ರೆಸ್ ಬೇರೆ, ಈಗಿನದು ಡುಪ್ಲಿಕೇಟ್ ಕಾಂಗ್ರೆಸ್: ಪ್ರಹ್ಲಾದ್‌ ಜೋಶಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ನಿಧನರಾದ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಅವರ ತಂದೆ ಬೈರತಿ ಅಂಜಿನಪ್ಪ ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಚಿವ ಬೈರತಿ ಬಸವರಾಜ್ ಅವರಿಗೆ ಮುಖ್ಯಮಂತ್ರಿಗಳು ಸಾಂತ್ವನ ಹೇಳಿದರು. ಇದನ್ನೂ ಓದಿ: ಸಾವರ್ಕರ್ ಅವರಂತೆ ಜೈಲಿನಿಂದ ಬಿಡುಗಡೆಗೊಳ್ಳಲು ಬ್ರಿಟಿಷರ ಕಾಲು ಹಿಡಿದು ಕ್ಷಮೆ ಕೋರಿದ ಹೇಡಿ ಅಲ್ಲ ನೆಹರೂ: ಸಿದ್ದರಾಮಯ್ಯ

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *