ಮಾಧುಸ್ವಾಮಿ ವಿರುದ್ಧ ಮಾತಾಡಿಲ್ಲ, ಅಧಿಕಾರಿಗಳಿಗೆ ಛೀಮಾರಿ ಹಾಕಿ ಅಂದೆ ಅಷ್ಟೇ: ಬಸವರಾಜ್

Public TV
1 Min Read

ತುಮಕೂರು: ನಾನು ಯಾವ ರಾಜಕಾರಣದ ಬಗ್ಗೆಯೂ ಮಾತಾಡಿಲ್ಲ ಎಂದು ಹೇಳುವ ಮೂಲಕ ಸಂಸದ ಜಿ.ಎಸ್ ಬಸವರಾಜ್ ನುಣುಚಿಕೊಂಡಿದ್ದಾರೆ.

ಸಚಿವ ಮಾಧುಸ್ವಾಮಿ ವಿರುದ್ಧ ಬೈರತಿ ಬಸವರಾಜ್ ಜೊತೆ ಪಿಸುಗುಟ್ಟಿರುವ ವಿಚಾರ ಸಂಬಂಧ ಮಾಧ್ಯಮಗಳು ಪ್ರಶ್ನಿಸಿದಾಗ, ನಾನು ಮಾಧುಸ್ವಾಮಿ ವಿರುದ್ಧ ಹೇಳಿಲ್ಲ. ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಳ್ಳಿ ಅಂತ ಹೇಳಿದ್ದೇನೆ ಅಷ್ಟೇ ಎಂದು ಹೇಳಿದ್ದಾರೆ. ಇದನ್ನೂ ಓದಿ: ನಮ್ಮ ಜಿಲ್ಲೆಯನ್ನೇ ಹಾಳ್ ಮಾಡಿಬಿಟ್ಟಿದ್ದಾನೆ – ಮಾಧುಸ್ವಾಮಿ ವಿರುದ್ಧ ಬಸವರಾಜ್, ಬೈರತಿ ಗುಸು ಗುಸು

ಕೆರೆಗಳ ಅಭಿವೃದ್ಧಿಗೆ ಕೇಂದ್ರದಿಂದ 200 ಕೋಟಿ ಕೊಡಿಸಿದ್ದೇನೆ ಎಂದಿದ್ದೇನೆ. ಕೆಲ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡಲ್ಲ. ಅವರಿಗೆ ಛೀಮಾರಿ ಹಾಕಿ ಅಂದಿದ್ದೆನೆ ಅಷ್ಟೇ. ನಾನು ಯಾವ ರಾಜಕಾರಣನೂ ಮಾತಾಡಿಲ್ಲ. ಯಾವ ಸಾವಿರ ಕೋಟಿ ರೂ. ಬಗ್ಗೆನೂ ಮಾತನಾಡಿಲ್ಲ ಎಂದು ಹೇಳುವ ಮೂಲಕ ಜಾರಿಕೊಂಡಿದ್ದಾರೆ. ಇದನ್ನೂ ಓದಿ: ತರಕಾರಿ, ಹಣ್ಣುಗಳನ್ನು ಲಂಚವಾಗಿ ಪಡೆಯುತ್ತಿದ್ದ ಅಧಿಕಾರಿಗಳು!

ನಡೆದಿದ್ದೇನು..?
ತುಮಕೂರಿನಲ್ಲಿ ಸುದ್ದಿಗೋಷ್ಠಿ ವೇಳೆ ಸಂಸದ ಜಿ.ಎಸ್ ಬಸವರಾಜ್ ಹಾಗೂ ಸಚಿವ ಬೈರತಿ ಬಸವರಾಜ್ ಅವರು ಗುಸು, ಗುಸು ಎಂದು ಮಾತನಾಡಿಕೊಂಡಿದ್ದರು. ಈ ವೇಳೆ ಸಚಿವ ಮಾಧುಸ್ವಾಮಿ ವಿರುದ್ಧ ಸಂಸದ ಬಸವರಾಜು ಆರೋಪಗಳ ಸುರಿಮಳೆಯೇ ಹರಿಸಿದ್ದರು. ದಕ್ಷಿಣ ಕೋರಿಯಾದ ಕಿಂಗ್ ಪಿನ್ ಇದ್ದಾನಲ್ಲ ಅವನ ತರ ಮಾಧುಸ್ವಾಮಿ ಆಡುತ್ತಿದ್ದಾನೆ. ಇದರಿಂದಾಗಿ ನಮ್ಮ ಜಿಲ್ಲೆಯನ್ನೇ ಹಾಳು ಮಾಡಿಬಿಟ್ಟಿದ್ದಾನೆ ಎಂದು ಜಿ.ಎಸ್ ಬಸವರಾಜ್ ಹರಿಹಾಯ್ದಿದ್ದರು.

 

Share This Article
Leave a Comment

Leave a Reply

Your email address will not be published. Required fields are marked *