ಕಾವೇರಿ ವಿಚಾರದಲ್ಲಿ ಸುಪ್ರೀಂ ತೀರ್ಪು ಕರ್ನಾಟಕಕ್ಕೆ ಗಾಯದ ಮೇಲೆ ಬರ ಎಳೆದಂತಾಗಿದೆ: ಸಿ.ಟಿ.ರವಿ

Public TV
1 Min Read

ಬೆಂಗಳೂರು: ಕಾವೇರಿ (Cauvery Water Dispute) ವಿಚಾರದಲ್ಲಿ ಸುಪ್ರೀಂ ಕೋರ್ಟ್‌ (Supreme Court) ಕೊಟ್ಟ ತೀರ್ಪು ಕರ್ನಾಟಕಕ್ಕೆ ಗಾಯದ ಮೇಲೆ ಬರ ಎಳೆದಂತೆ ಆಗಿದೆ ಎಂದು ಮಾಜಿ ಸಚಿವ ಸಿ.ಟಿ.ರವಿ (C.T.Ravi) ಹೇಳಿದರು.

ಕಾವೇರಿ ವಿಚಾರದಲ್ಲಿ ರಾಜಕಾರಣ ಮಾಡಬೇಕೆಂಬ ದುರುದ್ದೇಶ ನಮಗೆ ಇಲ್ಲ. ಕಾಂಗ್ರೆಸ್ ಸರ್ಕಾರದ ವೈಫಲ್ಯ ಮುಂದಿಡಬೇಕಾದ ಉದ್ದೇಶ ಇದೆ. ನಾವು 42% ರಷ್ಟು ಮಳೆ ಕೊರತೆ ಇದ್ದರು ಕೂಡ, ವಾಸ್ತವ ಪರಿಸ್ಥಿತಿ ವಿವರಿಸಲಿಲ್ಲ. ಸಂಕಷ್ಟದ ಸ್ಥಿತಿಯಲ್ಲಿ ಇದ್ದೇವೆ ಎಂದು ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: ಕರ್ನಾಟಕಕ್ಕೆ ಸುಪ್ರೀಂ ಕೋರ್ಟ್‌ ಶಾಕ್‌ – ತ.ನಾಡಿಗೆ ನಿತ್ಯ 5,000 ಕ್ಯೂಸೆಕ್‌ ನೀರು ಹರಿಸುವಂತೆ ಸೂಚನೆ

ಸುಪ್ರೀಂ ಕೋರ್ಟ್‌ನಲ್ಲೂ ನಮಗೆ ಸಹಾಯ ಆಗಲಿಲ್ಲ. ತಮಿಳುನಾಡು ಕೇಳುವ ಮುಂಚೆಯೇ ಜೂನ್‌ನಿಂದಲೇ ನೀರು ಬಿಡಲು ಶುರು ಮಾಡಿದ್ದೇಕೆ? ನನಗೆ ಸಂಶಯ ಇರೋದು, ಡಿಎಂಕೆ ಬೆದರಿಕೆ ಹಾಕಿರಬಹುದಾ? ಹೈಕಮಾಂಡ್ ಒತ್ತಡ ಇತ್ತಾ? ನೀರು ಬಿಟ್ಟು ಪಂಚಾಯಿತಿ ಕರೆಯುವಂತೆ ಮಾಡಿದ್ರಿ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದರು.

ನೀರು ಬಿಟ್ಟ ಮೇಲೆ ಸರ್ವಪಕ್ಷ ಸಭೆ ಕರೆದ್ರಿ. ನೀರು ಬಿಟ್ಟ ಮೇಲೆ ಸಂಸದರ ಸಭೆ ಕರೆದ್ರಿ. ಎಲ್ಲ ಆದ್ಮೇಲೆ ನಿಮ್ಮ ಬೇಡಿಕೆ ಮುಂದಿಟ್ಟಿದ್ದೀರಿ. ಕಾಂಗ್ರೆಸ್ ರಾಜಕೀಯ ನಿರ್ಣಯಗಳಿಗಾಗಿ ಕರ್ನಾಟಕ ಬಲಿಪಶು ಮಾಡಿದ್ದಾರೆ. ವಾಸ್ತವಿಕ ಸಂಕಷ್ಟದ ಪರಿಸ್ಥಿತಿಯನ್ನ ಸುಪ್ರೀಂ ಕೋರ್ಟ್‌ಗೂ ಮನವರಿಕೆ ಮಾಡಿಕೊಡಲು ಆಗಲಿಲ್ಲ ಎಂದು ಬೇಸರಿಸಿದರು. ಇದನ್ನೂ ಓದಿ: ಕಾಂಗ್ರೆಸ್, ಬಿಜೆಪಿಯಿಂದ ಪ್ರತ್ಯೇಕ ಗಣೇಶನ ಪ್ರತಿಷ್ಠಾಪನೆ – ವಿಸರ್ಜನೆ ವೇಳೆ ಗುಂಪು ಘರ್ಷಣೆ

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್