ಬೆಂಗಳೂರು: ಮಾವು ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆ ಬೆಂಬಲ ಬೆಲೆ ಕೊಡುವ ಬಗ್ಗೆ ಕ್ಯಾಬಿನೆಟ್ನಲ್ಲಿ ಚರ್ಚೆ ಮಾಡಿ, ನಿರ್ಧಾರ ತೆಗೆದುಕೊಳ್ಳುವುದಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ತಿಳಿಸಿದ್ದಾರೆ.ಇದನ್ನೂ ಓದಿ: ಮುನೀರ್ಗೆ ಟ್ರಂಪ್ ಡಿನ್ನರ್ – ಪಾಕ್ ನೆಲದಿಂದ ಅಮೆರಿಕ ಇರಾನ್ ಮೇಲೆ ದಾಳಿ ಮಾಡುತ್ತಾ?
ಮಾವು ಬೆಲೆ ಕುಸಿತದ ಬಗ್ಗೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಮಾವು ಬೆಳೆಗಾರರು ಸಂಕಷ್ಟದಲ್ಲಿದ್ದಾರೆ. ಪ್ರಾರಂಭದಲ್ಲಿ ಮಾವು ಮೇಳ ಮಾಡಿದಾಗ ನಾನು ಹೋಗಿದ್ದೆ. ಆಗ ಬೆಲೆ ಜಾಸ್ತಿಯಿತ್ತು. ಈಗ ದಿಢೀರ್ ಅಂತ ಕಡಿಮೆ ಆಗಿದೆ. ಈ ಬಾರಿ ಬೆಳೆ ಜಾಸ್ತಿಯಾಗಿ, ಫಸಲು ಜಾಸ್ತಿ ಬಂದಿದೆ. ಕೋಲಾರದ (Kolar) ಹಣ್ಣು ಆಂಧ್ರಪ್ರದೇಶಕ್ಕೆ (Andhra Pradesh) ಹೋಗುತ್ತಿತ್ತು. ಈಗ ಆಂಧ್ರಪ್ರದೇಶದ ಸಿಎಂ ಕೋಲಾರದ ಹಣ್ಣಿಗೆ ಬ್ಯಾನ್ ಮಾಡಿದ್ದಾರೆ. ಹೀಗಾಗಿ ಬೆಲೆ ಕುಸಿತವಾಗಿದೆ ಎಂದು ತಿಳಿಸಿದರು.
ಬೆಲೆ ಕುಸಿತದ ಬಗ್ಗೆ ಕಳೆದ ಕ್ಯಾಬಿನೆಟ್ನಲ್ಲಿ ಚರ್ಚೆ ಮಾಡಿದ್ದೆವು. ಇವತ್ತು ಮತ್ತೆ ಚರ್ಚೆ ಮಾಡುತ್ತೇವೆ. ರೈತರು ಬೆಂಬಲ ಬೆಲೆ ಕೇಳುತ್ತಿದ್ದಾರೆ. ಇದರ ಬಗ್ಗೆ ಇವತ್ತು ಚರ್ಚೆ ಮಾಡಿ, ತೀರ್ಮಾನ ಮಾಡುತ್ತೇವೆ ಎಂದು ತಿಳಿಸಿದರು.ಇದನ್ನೂ ಓದಿ: ಮಲೆ ಮಾದಪ್ಪ ಮತ್ತೆ ಕೋಟಿ ಒಡೆಯ – 34 ದಿನದಲ್ಲಿ 15 ವಿದೇಶಿ ಕರೆನ್ಸಿ ಸೇರಿ 2.6 ಕೋಟಿ ಸಂಗ್ರಹ