ನಾನು ಇಮ್ರಾನ್ ಖಾನ್‍ರನ್ನು ಕೊಲ್ಲಲು ಬಂದಿದ್ದು ಆ ಒಂದು ಕಾರಣಕ್ಕಾಗಿ: ಆರೋಪಿ

Public TV
1 Min Read

ಇಸ್ಲಾಮಾಬಾದ್: ಜನರನ್ನು ದಾರಿತಪ್ಪಿಸುತ್ತಿರುವ ಕಾರಣಕ್ಕಾಗಿ ನಾನು ಮಾಜಿ ಪ್ರಧಾನಿ ಇಮ್ರಾನ್ ಖಾನ್‍ರನ್ನು (Imran Khan) ಕೊಲೆ ಮಾಡಲು ಗುಂಡುಹಾರಿಸಿದ್ದೇನೆ ಎಂದು ಬಂದೂಕುಧಾರಿ ಆರೋಪಿ ಪೊಲೀಸರೊಂದಿಗೆ (Police) ತಿಳಿಸಿದ್ದಾನೆ.

ಪಾಕಿಸ್ತಾನದ (Pakistan) ಪಂಜಾಬ್‍ನಲ್ಲಿ ಪ್ರತಿಭಟನಾ ರ‍್ಯಾಲಿ ನಡೆಸುತ್ತಿದ್ದ ವೇಳೆ ಬಂದೂಕುಧಾರಿಯೊಬ್ಬ ಇಮ್ರಾನ್ ಖಾನ್ ಅವರನ್ನು ಗುರಿಯಾಗಿಸಿಕೊಂಡು ಗುಂಡು ಹಾರಿಸಿದ್ದ. ಬಳಿಕ ಆರೋಪಿಯನ್ನು ಬಂಧಿಸಿ ವಿಚಾರಿಸಿದಾಗ, ನಾನು ಇಮ್ರಾನ್ ಖಾನ್‍ರನ್ನು ಕೊಲ್ಲಲೆಂದು ಬಂದಿದ್ದೆ. ಇಮ್ರಾನ್ ಖಾನ್ ಪಾಕಿಸ್ತಾನದ ಜನರರನ್ನು ದಾರಿ ತಪ್ಪಿಸುತ್ತಿದ್ದಾರೆ. ಹಾಗಾಗಿ ಇಮ್ರಾನ್ ಖಾನ್‍ರನ್ನು ಗುಂಡು ಹಾರಿಸಿ ಕೊಲ್ಲಲು ಯತ್ನಿಸಿದ್ದೇನೆ. ನಾನು ಒಬ್ಬನೇ ಬಂದಿದ್ದೇನೆ. ನನ್ನ ಹಿಂದೆ ಯಾರು ಇಲ್ಲ ಎಂದಿದ್ದಾನೆ. ಇದನ್ನೂ ಓದಿ: ಇಮ್ರಾನ್ ಖಾನ್ ಮೇಲೆ ಗುಂಡಿನ ದಾಳಿ – ಗ್ರೇಟ್ ಎಸ್ಕೇಪ್

ಇಂದು ಜಫರಾಲಿ ಖಾನ್ ಚೌಕ್‍ನಲ್ಲಿ ಘಟನೆ ನಡೆದಿದ್ದು, ಇಮ್ರಾನ್ ಖಾನ್ ಅವರ ಕಾಲಿಗೆ ಗಾಯಗಳಾಗಿವೆ. ದುಷ್ಕರ್ಮಿ 3-4 ಬಾರಿ ಗುಂಡು ಹಾರಿಸಿದ್ದಾನೆ. ಘಟನೆಯಲ್ಲಿ ಇಮ್ರಾನ್ ಖಾನ್ ಅವರ ಸಹಾಯಕ ಸೇರಿದಂತೆ ಒಟ್ಟು 15 ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ. ಒಬ್ಬಾತ ಮೃತಪಟ್ಟಿರುವುದಾಗಿ ವರದಿಯಾಗಿದೆ. ಇದನ್ನೂ ಓದಿ: ಅಲ್ಲ ನನಗೆ ಮತ್ತೊಂದು ಜನ್ಮ ನೀಡಿದ್ದಾನೆ: ಗುಂಡು ತಗುಲಿದ ಬಳಿಕ ಇಮ್ರಾನ್ ಖಾನ್ ಮಾತು

ಇಮ್ರಾನ್ ಖಾನ್ ಅವರು ರ‍್ಯಾಲಿಯ ವೇಳೆ ತೆರೆದ ಕಂಟೇನರ್‌ನಲ್ಲಿ ಪ್ರಯಾಣಿಸುತ್ತಿದ್ದರು. ಗುಂಡಿನ ದಾಳಿ ನಡೆದ ಬಳಿಕ ಅವರನ್ನು ಬುಲೆಟ್ ಪ್ರೂಫ್ ವಾಹನಕ್ಕೆ ವರ್ಗಾಯಿಸಲಾಯಿತು. ಇಮ್ರಾನ್ ಖಾನ್ ಅವರ ಸಹಾಯಕ ಪಿಟಿಐ ಮುಖಂಡ ಫೈಸಲ್ ಜಾವೇದ್ ಕೂಡಾ ಗಾಯಗೊಂಡಿದ್ದಾರೆ. ಘಟನೆಯ ಬಳಿಕ ಬಂದೂಕುಧಾರಿಯನ್ನು ಬಂಧಿಸಲಾಗಿದೆ. ಇಮ್ರಾನ್ ಖಾನ್‍ನ ಬೆಂಬಲಿಗರೊಬ್ಬರು ಆತನನ್ನು ದಾಳಿ ನಡೆಸದಂತೆ ತಡೆದಿದ್ದಾರೆ. ಆತ ಎಕೆ-47 ನಿಂದ ಗುಂಡು ಹಾರಿಸಿದ್ದು, ಇದು ಉದ್ದೇಶ ಪೂರಕ ದಾಳಿ ಎಂದು ಪಿಟಿಐ ಮುಖಂಡ ಫವಾದ್ ಚೌಧರಿ ಹೇಳಿದ್ದಾರೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *