ವೈಯಕ್ತಿಕ ವಿಷಯ ಬಿಟ್ಟು ತಂಡ ಬಲಗೊಳಿಸಿ ರೋಹಿತ್ ಶರ್ಮಾಗೆ ಗವಾಸ್ಕರ್ ಸಲಹೆ

Public TV
1 Min Read

ನವದೆಹಲಿ: ಕೌಟುಂಬಿಕ ಕಾರಣಗಳನ್ನು ಎದುರಿಟ್ಟು ಟೀಂ ಇಂಡಿಯಾ ಹಾಗೂ ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಿಂದ ದೂರ ಉಳಿದ ರೋಹಿತ್ ಶರ್ಮಾ (Rohit Sharma) ನಡೆಗೆ ಭಾರತ ಕ್ರಿಕೆಟ್ ದಿಗ್ಗಜ ಸುನಿಲ್ ಗವಾಸ್ಕರ್ (Sunil Gavaskar) ಗರಂ ಆಗಿದ್ದಾರೆ.

ಪ್ರತಿ ಪಂದ್ಯದಲ್ಲಿಯೂ ರೋಹಿತ್ ಶರ್ಮಾ ಆಡಬೇಕು. ವಯಕ್ತಿಕ ವಿಷಯಗಳನ್ನು ಬಿಟ್ಟು ತಂಡವನ್ನು ಸದೃಢಗೊಳಿಸುವತ್ತ ಗಮನಹರಿಸಬೇಕು ಎಂದು ಸಲಹೆ ನೀಡಿದ್ದಾರೆ. ಇದನ್ನೂ ಓದಿ: 4 ವರ್ಷಗಳ ಬಳಿಕ ತವರಿನಲ್ಲಿ ಸರಣಿ ಸೋಲು – ನಂ.1 ಪಟ್ಟ ಕಳೆದುಕೊಂಡ ಭಾರತ

ವಿಶ್ವಕಪ್ ಪಂದ್ಯ (World Cup) ನಡೆಯಲಿರುವ ಈ ವರ್ಷ ಆಟಗಾರರು ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು. ತುರ್ತು ಸಂದರ್ಭಗಳನ್ನು ಹೊರತುಪಡಿಸಿ ಉಳಿದಂತೆ ಕೌಟುಂಬಿಕ ವಿಚಾರಗಳಿಗೆ ಪ್ರಾಮುಖ್ಯತೆ ನೀಡಬಾರದು ಎಂದು ಎಚ್ಚರಿಸಿದ್ದಾರೆ.

ರೋಹಿತ್ ಗೈರಿನಲ್ಲಿ ಮೊದಲ ಪಂದ್ಯದ ಹಾರ್ದಿಕ್ ಪಾಂಡ್ಯಾ ( Hardik Pandya) ನಾಯಕತ್ವದಲ್ಲಿ ಟೀಮ್ ಇಂಡಿಯಾ ಐದು ವಿಕೆಟ್ ಗೆಲುವು ದಾಖಲಿಸಿತ್ತು. ಈ ಮೂಲಕ 1-0 ಮುನ್ನಡೆ ಪಡೆದಿತ್ತು.

ನಂತರದ ಎರಡು ಪಂದ್ಯಗಳಲ್ಲಿ ರೋಹಿತ್ ಶರ್ಮಾ ನಾಯಕತ್ವ ವಹಿಸಿ ತಂಡ ಸೋಲು ಅನುಭವಿಸಿತ್ತು. ಈ ಮೂಲಕ 1-2 ಅಂತರದಲ್ಲಿ ಸರಣಿ ಗೆಲ್ಲುವ ಅವಕಾಶ ಕಳೆದುಕೊಂಡಿತ್ತು. ಇದನ್ನೂ ಓದಿ: 3 ಪಂದ್ಯ, ಫಸ್ಟ್ ಬಾಲಿಗೆ ಔಟ್ – ಕೆಟ್ಟ ದಾಖಲೆ ಬರೆದ ಸೂರ್ಯ

Share This Article
Leave a Comment

Leave a Reply

Your email address will not be published. Required fields are marked *