ಹೊಸ ವರ್ಷ ಸಂಭ್ರಮಾಚರಣೆ ಮುಗಿಸಿ ಬರೋವಾಗ ಡಿವೈಡರ್‌ಗೆ ಕಾರು ಡಿಕ್ಕಿ- ಸ್ಥಳದಲ್ಲೇ ಮೂವರ ದುರ್ಮರಣ

Public TV
1 Min Read

ಬೆಂಗಳೂರು: ಡಿವೈಡರ್‌ಗೆ ಟಾಟಾ ಸಫಾರಿ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಮೈಲಾಪುರ ಗೇಟ್ ಬಳಿ ನಡೆದಿದೆ.

ಬೆಳಗಿನ ಜಾವ ಮೂರು ಗಂಟೆ ಸುಮಾರಿನಲ್ಲಿ ಈ ಅಪಘಾತ ಸಂಭವಿಸಿದ್ದು, ಮೃತರನ್ನು ಆಂಧ್ರ ಪ್ರದೇಶ ಮೂಲದವರು ಎಂದು ಗುರುತಿಸಲಾಗಿದೆ. ಆಂಧ್ರದ ಪಶ್ಚಿಮ ಗೋದಾವರಿ ಮೂಲದ ಶ್ರೀನಾಥ್(40), ಶ್ರೀಲೇಖಾ(36), ಶ್ರೀಲತಾ(32) ಮೃತ ದುರ್ದೈವಿಗಳು.

ಹೊಸ ವರ್ಷಾಚರಣೆ ಮುಗಿಸಿ ಆಂಧ್ರದಿಂದ ಬೆಂಗಳೂರಿನ ವೈಟ್ ಫೀಲ್ಡ್ ನತ್ತ 5 ಮಂದಿ ಕಾರಿನಲ್ಲಿ ಬರುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಹೊಸಕೋಟೆ ತಾಲೂಕಿನ ಮೈಲಾಪುರ ಗೇಟ್ ಬಳಿ ಬರುತ್ತಿದ್ದ ವೇಳೆ ಡಿವೈಡರ್‌ಗೆ ಟಾಟಾ ಸಫಾರಿ ಕಾರು ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಮೂವರು ಮೃತಪಟ್ಟಿದ್ದು ಗಾಯಗೊಂಡ ಇಬ್ಬರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಘಟನೆ ಕುರಿತು ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *