ದೇವರ ದರ್ಶನ ಪಡೆದು ಹಿಂದಿರುಗುತ್ತಿದ್ದ ಭಕ್ತರ ಕಾರು ಪಲ್ಟಿ- ಓರ್ವ ಸಾವು

Public TV
1 Min Read

ಮಂಗಳೂರು: ದೇವರ ದರ್ಶನ ಪಡೆದು ಹಿಂದಿರುಗುತ್ತಿದ್ದ ಪ್ರಯಾಣಿಕರ ಕಾರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟಿಯಲ್ಲಿ ಹೊಂಡಕ್ಕೆ ಉರುಳಿ ಬಿದ್ದು, ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಬೆಂಗಳೂರು ಮೂಲದ ನಿವಾಸಿಗಳು ಧರ್ಮಸ್ಥಳಕ್ಕೆ ಬಂದು ದೇವರ ದರ್ಶನ ಪಡೆದು ಹಿಂದಿರುಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಶಿರಾಡಿ ಘಾಟಿಯಲ್ಲಿ ಕಾರು ಚಲಿಸುತ್ತಿದ್ದಾಗ ಶಿರಾಡಿ ಗ್ರಾಮದ ಕೊಡ್ಯಕಲ್ಲು ಎಂಬಲ್ಲಿ ಕಾರು ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದಿದೆ. ಈ ವೇಳೆ ಬೆಂಗಳೂರು ಮೂಲದ ಸುನಿಲ್ ಸ್ಥಳದಲ್ಲೇ ಸಾವನ್ನಪ್ಪಿದ್ದು, ಕಾರಿನಲ್ಲಿದ್ದ ಪ್ರಶಾಂತ್, ಮನೋಜ್ ಸೇರಿದಂತೆ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಸದ್ಯ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಾರು ಪಲ್ಟಿಯಾದ ಪರಿಣಾಮ ಸಂಪೂರ್ಣ ನಜ್ಜುಗುಜ್ಜಾಗಿದೆ. ಘಾಟಿ ಹೆದ್ದಾರಿಯ ಬದಿಯಲ್ಲಿ ತಡೆಗೋಡೆ ರಚಿಸದ ಕಾರಣ ಅಪಾಯಕಾರಿ ಅಪಘಾತಗಳು ಮರುಕಳಿಸುತ್ತಲೇ ಇದೆ. ಅಲ್ಲದೆ ಮಳೆಗಾಲದ ಸಂದರ್ಭದಲ್ಲಿ ಅಪಘಾತಗಳು ಹೆಚ್ಚು ಸಂಭವಿಸುತ್ತದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *