ನೆಲಮಂಗಲ: ಕಾರು ಚಾಲಕನ ನಿಯಂತ್ರಣ ತಪ್ಪಿ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿ ಮಕ್ಕಳೊಂದಿಗೆ ಹೆತ್ತವರು ಪವಾಡ ಸದೃಶವಾಗಿ ಪಾರಾದ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ನಗರದ ಬಿನ್ನಮಂಗಲ ಬಳಿ ಸಂಭವಿಸಿದೆ.
ಸ್ವಿಫ್ಟ್ ಕಾರು ಬ್ರೇಕ್ ಫೇಲ್ ಆಗಿ ಲಾರಿಗೆ ಡಿಕ್ಕಿಯಾಗಿರುವ ಶಂಕೆ ವ್ಯಕ್ತವಾಗಿದೆ, ಬೆಂಗಳೂರು ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತವಾಗಿದ್ದು, ಕಾರಿನಲ್ಲಿದ್ದವರು ತುಮಕೂರು ಮಾರ್ಗವಾಗಿ ಬೆಂಗಳೂರು ಕಡೆ ಸಂಚರಿಸುತ್ತಿದ್ದರು ಈ ವೇಳೆ ಅಪಘಾತ ನಡೆದಿದ್ದು, ಕಾರಿನಲ್ಲಿದ್ದವರು ಪವಾಡ ರೀತಿಯಲ್ಲಿ ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಇದನ್ನೂ ಓದಿ: ಟ್ರ್ಯಾಕ್ಟರ್ಗೆ ಗುದ್ದಿದ ಕಾರ್- ಐದು ಮಂದಿ ಸ್ಥಳದಲ್ಲೇ ಸಾವು
ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಸ್ಥಳದಲ್ಲಿ ಗಾಯಗೊಂಡವರ ರೋಧನೆ ಮುಗಿಲುಮುಟ್ಟಿತ್ತು. ನೆಲಮಂಗಲ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಕೆಟ್ಟದಾಗಿ ಮುಟ್ಟಿದ್ದಕ್ಕಾಗಿ ಛೀಮಾರಿ ಹಾಕಿದ ಮಹಿಳೆಯನ್ನೇ ಕೊಲ್ಲಲು ಮುಂದಾದ ವ್ಯಕ್ತಿ ಅರೆಸ್ಟ್