Kolar | ಚೆನ್ನೈ-ಬೆಂಗಳೂರು ಎಕ್ಸ್‌ಪ್ರೆಸ್‌ ವೇಯಲ್ಲಿ ಕಾರು ಅಪಘಾತ – ತಾಯಿ ಸಾವು, ಮಗ ಗಂಭೀರ

Public TV
1 Min Read

ಕೋಲಾರ: ಚೆನ್ನೈ-ಬೆಂಗಳೂರು ಎಕ್ಸ್‌ಪ್ರೆಸ್ ಕಾರಿಡಾರ್ ಹೈವೇಯಲ್ಲಿ (Chennai-Bengaluru Expressway) ಭೀಕರ ಕಾರು ಅಪಘಾತವಾದ ಪರಿಣಾಮ ಕಾರಿನಲ್ಲಿದ್ದ ತಾಯಿ ಸಾವನ್ನಪ್ಪಿದ್ದು, ಮಗ ಗಂಭೀರ ಗಾಯಗೊಂಡ ಘಟನೆ ಕೋಲಾರ (Kolar) ಜಿಲ್ಲೆ ಮಾಲೂರು (Malur) ತಾಲೂಕಿನ ಆನೇಪುರ ಗ್ರಾಮದ ಬಳಿ ನಡೆದಿದೆ.

ಕೆಜಿಎಫ್ ಮೂಲದ ಪುಷ್ಪಲತಾ (70) ಮೃತ ಮಹಿಳೆ. ಘಟನೆಯಲ್ಲಿ ಪುಷ್ಪಲತಾ ಪುತ್ರ ಮಂಜುನಾಥ್ ಗಂಭೀರ ಗಾಯಗೊಂಡಿದ್ದಾರೆ. ಇದನ್ನೂ ಓದಿ: ಭಾರತ-ಪಾಕಿಸ್ತಾನ ಕದನ ವಿರಾಮದಲ್ಲಿ 3ನೇ ವ್ಯಕ್ತಿಯ ಪಾತ್ರವಿಲ್ಲ – ಮೋದಿ

ಕಾರು ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಮಾಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ಸಂಭವಿಸಿದೆ. ಇದನ್ನೂ ಓದಿ: ಕೆಸಿಇಟಿ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಸುಮಂತ್ ರಾಜ್ಯಕ್ಕೆ 4ನೇ ರ‍್ಯಾಂಕ್

Share This Article