ಸೇತುವೆಗೆ ಡಿಕ್ಕಿ ಹೊಡೆದು ಹಳ್ಳಕ್ಕೆ ಬಿದ್ದ ಕಾರು- ಸ್ಥಳದಲ್ಲೇ ಓರ್ವ ಸಾವು

Public TV
1 Min Read

ರಾಯಚೂರು: ಜಿಲ್ಲೆಯ ಲಿಂಗಸುಗೂರಿನ ಮಾತಾಮಾಣಿಕೇಶ್ವರಿ ಮಠದ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಹಳ್ಳಕ್ಕೆ ಬಿದ್ದ ಘಟನೆ ನಡೆದಿದೆ.

ರಾಕೇಶ್ (32) ಮೃತನಾಗಿದ್ದಾನೆ. ಈ ಅಪಘಾತದಲ್ಲಿ ತಲೆಗೆ ಬಲವಾಗಿ ಪೆಟ್ಟು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಚಾಲಕ ರವಿಗೆ ಗಂಭೀರ ಗಾಯಗಳಾಗಿವೆ.

ಚಾಲಕನ ನಿಯಂತ್ರಣ ತಪ್ಪಿ ಕಾರು ಯಲಗಲದಿನ್ನಿ ಸೇತುವೆ ತಡೆಗೋಡೆ ಕಲ್ಲಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಹಳ್ಳದ ಸೇತುವೆ ಕೆಳಗೆ ಬಿದ್ದು ಕಾರು ನಜ್ಜುಗುಜ್ಜಾಗಿದೆ.ಇದನ್ನೂ ಓದಿ: ಯುಪಿಯಲ್ಲಿ ಯೋಗಿ ಸರ್ಕಾರ ಅಪರಾಧಿಗಳೊಂದಿಗೆ ʼಜೈಲು-ಜೈಲುʼ ಆಟವಾಡ್ತಿದೆ: ಮೋದಿ

ಘಟನೆಗೆ ಚಾಲಕನ ಅತೀ ವೇಗ ಹಾಗೂ ನಿರ್ಲಕ್ಷ್ಯತನ ಕಾರಣವಾಗಿದೆ. ಗಾಯಾಳುವನ್ನ ಲಿಂಗಸುಗೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಕೊರೊನಾ 3ನೇ ಅಲೆ ಭೀತಿ – ಪಶ್ಚಿಮ ಬಂಗಾಳದಲ್ಲಿ ನಾಳೆಯಿಂದ ಶಾಲಾ, ಕಾಲೇಜ್ ಬಂದ್

Share This Article
Leave a Comment

Leave a Reply

Your email address will not be published. Required fields are marked *