Tumakuru | ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು

By
1 Min Read

ತುಮಕೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರೊಂದು (Car) ಹೊತ್ತಿ ಉರಿದ ಘಟನೆ ತುಮಕೂರು (Tumakuru) ಜಿಲ್ಲೆ ಗುಬ್ಬಿ (Gubbi) ತಾಲೂಕಿನ ಯಲ್ಲಾಪುರ ಗೇಟ್ ಬಳಿ ನಡೆದಿದೆ.

ತುಮಕೂರಿನಿಂದ ಹೊಸದುರ್ಗದ ಕಡೆ ಸಾಗುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ಕಾರಿನ ಮುಂಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಕಾರಿನಿಂದ ಚಾಲಕ ಇಳಿದಿದ್ದಾರೆ. ಬಳಿಕ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಬಂದು ಬೆಂಕಿ ನಂದಿಸುವಷ್ಟರಲ್ಲಿ ಕಾರು ಸುಟ್ಟು ಕರಕಲಾಗಿದೆ. ಇದನ್ನೂ ಓದಿ: ಡಿಕೆಶಿ ಭರವಸೆ ನೀಡಿದ್ದಾರೆ, ನಾನೇ ಮುಂದಿನ KMF ಅಧ್ಯಕ್ಷ: ನಂಜೇಗೌಡ

ಹೇಮಂತ್ ಎಂಬವರಿಗೆ ಸೇರಿದ ಡಸ್ಟರ್ ಕಾರು ಬೆಂಕಿಗಾಹುತಿಯಾಗಿದೆ. ತುಮಕೂರು ಕಡೆಯಿಂದ ಹೊಸದುರ್ಗದ ಬಳಿಯ ಮನೆಗೆ ತೆರಳುವಾಗ ಘಟನೆ ನಡೆದಿದೆ. ಗುಬ್ಬಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಇದನ್ನೂ ಓದಿ: ಕಾಳಸಂತೆಯಲ್ಲಿ ರಸಗೊಬ್ಬರ ಮಾರಾಟ ವ್ಯವಸ್ಥೆ ಸರಿಪಡಿಸಲು ಕರ್ನಾಟಕ ಸಿಎಸ್‌ಗೆ ಸೂಚಿಸಿ – ಕೇಂದ್ರಕ್ಕೆ ಡಾ.ಕೆ.ಸುಧಾಕರ್ ಆಗ್ರಹ

Share This Article