ಕಾಂಪೌಂಡ್ ಒಳಗಡೆ ನುಗ್ಗಿತು ಕಾರು

Public TV
1 Min Read

ಬೆಂಗಳೂರು: ಅತಿ ವೇಗವಾಗಿ ಬಂದ ಕಾರೊಂದು ಕಾಂಪೌಂಡ್‍ಗೆ ಡಿಕ್ಕಿ ಹೊಡೆದ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನ ರಾಜ್‍ಭವನ ರಸ್ತೆಯಲ್ಲಿ ನಡೆದಿದೆ.

ನಸುಕಿನ ಜಾವ ಸುಮಾರು 3 ಗಂಟೆ ವೇಳೆಗೆ ಕಾರೊಂದು ರಾಜ್‍ಭವನ ರಸ್ತೆಯಲ್ಲಿರುವ ಪ್ರಸಾರ ಭಾರತಿ ಗೋಡೆಗೆ ಡಿಕ್ಕಿ ಹೊಡೆದಿದೆ. ಚಾಲಕ ಕಾರನ್ನು ಅತಿ ವೇಗವಾಗಿ ಚಲಿಸುತ್ತಿದ್ದ. ಈ ಹಿನ್ನೆಲೆಯಲ್ಲಿ ತಿರುವಿನಲ್ಲಿ ಕಾಂಪೌಂಡ್ ಒಳಗಡೆ ನುಗ್ಗಿಸಿದ್ದಾನೆ. ಘಟನೆಯಲ್ಲಿ ಕಾರು ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಇದನ್ನೂ ಓದಿ: ಅಕ್ರಮ ಹಣ ಸಾಗಣೆ ಪ್ರಕರಣದಲ್ಲಿ ಕೇರಳ ಸಿಎಂ ಭಾಗಿ – ಸ್ವಪ್ನಾ ಸುರೇಶ್ ಆರೋಪ

ಸದ್ಯ ಕಾಂಪೌಂಡ್ ಮೇಲಿಂದ ಕಾರನ್ನು ತೆರವುಗೊಳಿಸಲಾಗಿದೆ. ಘಟನೆ ಸಂಬಂಧಿಸಿ ಹೈಗ್ರೌಂಡ್ಸ್ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಇದನ್ನೂ ಓದಿ: ಮುತಾಲಿಕ್‌, ಯಶ್‌ ಪಾಲ್‌ ತಲೆ ಕಡಿದರೆ 20 ಲಕ್ಷ – ಸಾಮಾಜಿಕ ಜಾಲತಾಣದಲ್ಲಿ ಓಪನ್‌ ಬೆದರಿಕೆ!

Share This Article
Leave a Comment

Leave a Reply

Your email address will not be published. Required fields are marked *