ನನ್ನ ಕೆಲಸದ ಟೈಂ ಮುಗಿದಿದೆ ಅಂದಿದ್ದಕ್ಕೆ ಪೆಟ್ರೋಲ್ ಬಂಕ್ ಸಿಬ್ಬಂದಿಗೆ ಥಳಿತ!

By
1 Min Read

ಚಿಕ್ಕಮಗಳೂರು: ನನ್ನ ಕೆಲಸದ ಸಮಯ ಮುಗಿದಿದೆ, ಬೇರೆಯವರು ಪೆಟ್ರೋಲ್ (Petrol) ಹಾಕುತ್ತಾರೆ ಎಂದಿದ್ದಕ್ಕೆ ವ್ಯಕ್ತಿಯೊಬ್ಬ ಬಂಕ್ ಸಿಬ್ಬಂದಿಗೆ ಅಟ್ಟಾಡಿಸಿ ಹೊಡೆದ ಘಟನೆ ಮೂಡಿಗೆರೆಯ (Mudigere) ಜನ್ನಾಪುರದಲ್ಲಿ ನಡೆದಿದೆ.

ಬಂಕ್ ಸಿಬ್ಬಂದಿ ಕೆಲಸ ಮುಗಿಸಿ ಹೊರಟಿದ್ದ ವೇಳೆ ಕಾರಿನಲ್ಲಿ (Car) ಬಂದ ವ್ಯಕ್ತಿ ಪೆಟ್ರೋಲ್ ಹಾಕುವಂತೆ ಹೇಳಿದ್ದಾನೆ. ಇದಕ್ಕೆ ಸಿಬ್ಬಂದಿ ಕೆಲಸದ ಸಮಯ ಮುಗಿದಿದೆ. ಇನ್ನೊಬ್ಬರು ಪೆಟ್ರೋಲ್ ಹಾಕುತ್ತಾರೆ ಎಂದಿದ್ದಾರೆ. ಈ ವಿಚಾರಕ್ಕೆ ಕಾರಿನಲ್ಲಿ ಬಂದಿದ್ದ ಮಧು ಹುರುಡಿ ಎಂಬಾತ ಬಂಕ್ ಮ್ಯಾನೇಜರ್ ಸೇರಿದಂತೆ ನಾಲ್ವರ ಮೇಲೆ ಬ್ಯಾಟ್‍ನಲ್ಲಿ ಹಲ್ಲೆ ನಡೆಸಿದ್ದಾನೆ. ಈ ವೇಳೆ ನಾಲ್ವರು ತಪ್ಪಿಸಿಕೊಳ್ಳಲು ಓಡಿಹೋಗುತ್ತಿರುವುದು ಸ್ಥಳೀಯರ ಮೊಬೈಲ್‍ನಲ್ಲಿ ಸೆರೆಯಾಗಿದೆ. ಇದನ್ನೂ ಓದಿ: ತುಮಕೂರಿನಲ್ಲಿ ಸರಣಿ ಅಪಘಾತ – ಇಬ್ಬರು ಸಾವು, ಹಲವರಿಗೆ ಗಾಯ

ಘಟನೆ ಕುರಿತು ಗೋಣಿಬೀಡು ಪೊಲೀಸ್ (Police) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಬಂಧಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಇನ್ನೊಬ್ಬನ ಮೇಲೆ ದ್ವೇಷ ತೀರಿಸಿಕೊಳ್ಳಲು ಆತ್ಮೀಯ ಸ್ನೇಹಿತನನ್ನೇ ಕೊಂದ ಕಿರಾತಕ!

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್