ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಉರುಳಿದ ಕಾರು- ಚಾಲಕ ಸಾವು

Public TV
1 Min Read

ಹಾಸನ: ಚಾಲಕನ ನಿಯಂತ್ರಣ ತಪ್ಪಿ ಕಾರು ಕಾಲುವೆಗೆ ಉರುಳಿದ ಪರಿಣಾಮ ಚಾಲಕ ಮೃತಪಟ್ಟಿರುವ ಘಟನೆ ಹೊಳೆ ನರಸೀಪುರ ತಾಲೂಕಿನ ತೇಜೂರು ಗ್ರಾಮದಲ್ಲಿ ನಡೆದಿದೆ.

ACCIDENT

ಸುಮಾರು 43 ವರ್ಷದ ಶಿವಮೂರ್ತಿ ಮೃತ ದುರ್ದೈವಿ. ಇದನ್ನೂ ಓದಿ: ದೀಪಾವಳಿಯಲ್ಲಿ ಹಸಿರು ಪಟಾಕಿ ಸಿಡಿಸಲು ಅವಕಾಶ- ಮಾರ್ಗಸೂಚಿ ಬಿಡುಗಡೆ

ಹಳ್ಳಿಮೈಸೂರಿನಿಂದ ಕೆಲಸ ಮುಗಿಸಿಕೊಂಡು ಶಿವಮೂರ್ತಿ ಮನೆಗೆ ತೆರಳುತ್ತಿದ್ದರು. ಈ ವೇಳೆ ಅವರ ನಿಯಂತ್ರಣ ತಪ್ಪಿದ ಕಾರು ಮೊದಲು ವಿದ್ಯುತ್ ಪರಿವರ್ತಕಕ್ಕೆ ಡಿಕ್ಕಿ ಹೊಡೆದಿದೆ. ನಂತರ ಕಾರು ಪಕ್ಕದಲ್ಲೇ ಇದ್ದ ಕಾಲುವೆಗೆ ಉರುಳಿದೆ. ಕಾಲುವೆಯಲ್ಲಿದ್ದ ನೀರಿಗೆ ಸಿಲುಕಿ ಉಸಿರುಗಟ್ಟಿ ಚಾಲಕ ಶಿವಮೂರ್ತಿ ಮೃತಪಟ್ಟಿದ್ದಾರೆ. ಇದನ್ನೂ ಓದಿ: ರಾಜ್‍ಕುಮಾರ್ ಮಕ್ಕಳ ಜೊತೆ ನಾನು ಆ್ಯಕ್ಟಿಂಗ್ ಮಾಡ್ಬೇಕುಂತ ಅಮ್ಮನಿಗೆ ಆಸೆ ಇತ್ತು: ರಚಿತಾ ರಾಮ್

POLICE JEEP

ಕಾರು ಕಾಲುವೆಗೆ ಬೀಳುವುದನ್ನು ಗಮನಿಸಿದ ಜನರು, ಕಾರಿನ ಚಾಲಕನನ್ನು ರಕ್ಷಿಸಲು ಪ್ರಯತ್ನಿಸಿದರೂ ಸಾಧ್ಯವಾಗಿಲ್ಲ. ಹಳ್ಳಿಮೈಸೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *