ಹೇಮಾವತಿ ನದಿಗೆ ಬಿದ್ದ ಕಾರು – ಇಬ್ಬರ ಶವ ಪತ್ತೆ, ಮತ್ತಿಬ್ಬರು ಕೊಚ್ಚಿ ಹೋಗಿರೋ ಶಂಕೆ

By
1 Min Read

ಹಾಸನ: ಹೊಳೆನರಸೀಪುರದ (Holenarasipura) ಹರಳಹಳ್ಳಿ ಗ್ರಾಮದ ಬಳಿಯ ಹೇಮಾವತಿ ನದಿ (Hemavati River) ಎಡದಂಡೆ ನಾಲೆಯಲ್ಲಿ ಕಾರೊಂದು ಪತ್ತೆಯಾಗಿದೆ.

ಶನಿವಾರ ರಾತ್ರಿ ನಾಲೆಗೆ ಕಾರು ಬಿದ್ದಿದೆ ಎಂದು ಶಂಕಿಸಲಾಗಿದೆ. ಕಾರನ್ನು ನೋಡಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಅಗ್ನಿಶಾಮಕದಳದ ಸಿಬ್ಬಂದಿ ಹಾಗೂ ಸ್ಥಳೀಯರು ಕಾರನ್ನು ಮೇಲೆತ್ತಿದ್ದಾರೆ. ಕಾರು ಪತ್ತೆಯಾದ ಸಮೀಪದ ದೊಡ್ಡಕುಂಚೇವು ಗ್ರಾಮದ ಕೆರೆಯಲ್ಲಿ ಓರ್ವ ಪುರುಷ ಹಾಗೂ ಮಹಿಳೆಯ ಶವಗಳು ಪತ್ತೆಯಾಗಿವೆ. ಕಾರಿನಲ್ಲಿದ್ದ ಇನ್ನಿಬ್ಬರು ಕೊಚ್ಚಿಕೊಂಡು ಹೋಗಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಪತ್ನಿಗೆ ಬೆಂಕಿ ಹಚ್ಚಿ ಕೊಂದವನ ಕಾಲಿಗೆ ಗುಂಡೇಟು – ನನಗ್ಯಾವ ಪಶ್ಚಾತ್ತಾಪ ಇಲ್ಲ ಎಂದ ಪಾಪಿ!

ಹೊಳೆನರಸೀಪುರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶವಗಳ ಗುರುತು ಇನ್ನೂ ಪತ್ತೆಯಾಗಿಲ್ಲ.

ಕಾರು ಕೊಂತಗೋಡನಹಳ್ಳಿ ಗ್ರಾಮದ ಪ್ರೇಮಕುಮಾರ್ (38) ಎಂಬುವವರಿಗೆ ಸೇರಿದ್ದು ಎಂದು ತಿಳಿದು ಬಂದಿದೆ. ಪ್ರೇಮಕುಮಾರ್ ಆ.17ರಿಂದ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಶಾಂತಿಗ್ರಾಮ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಇನ್ನೂ ಪೊಲೀಸರು ಕರೆ ಮಾಡಿದಾಗ ಪ್ರೇಮಕುಮಾರ್ ಫೋನ್ ಮೊದಲು ರಿಂಗ್ ಆಗಿದೆ, ಬಳಿಕ ಸ್ವಿಚ್ ಆಫ್ ಆಗಿದೆ. ಇದನ್ನೂ ಓದಿ: ನನ್ನ ಮಗಳನ್ನು ಕೊಂದ ಪಾಪಿಯನ್ನು ಎನ್‌ಕೌಂಟರ್ ಮಾಡಿ: ನಿಕ್ಕಿ ತಂದೆ ಕಣ್ಣೀರು

Share This Article