ಕಾರವಾರ| ಶಾರ್ಟ್ ಸರ್ಕ್ಯೂಟ್‌ನಿಂದ ಕಾರಿಗೆ ಬೆಂಕಿ

Public TV
0 Min Read

ಕಾರವಾರ: ಶಾರ್ಟ್ ಸರ್ಕ್ಯೂಟ್‌ನಿಂದ ಕಾರಿಗೆ ಬೆಂಕಿ ಹೊತ್ತಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಪಿಕಳೆ ರಸ್ತೆಯಲ್ಲಿ ನಡೆದಿದೆ.

ಸಮಯಕ್ಕೆ ಸರಿಯಾಗಿ ಬಂದ ಅಗ್ನಿಶಾಮಕ ಸಿಬ್ಬಂದಿಯಿಂದಾಗಿ ದೊಡ್ಡ ಅನಾಹುತ ತಪ್ಪಿದೆ. ಭಾಸ್ಕರ್ ಡಿ. ನಾಯ್ಕ ಎಂಬವರಿಗೆ ಸೇರಿದ ಹುಂಡಾಯ್ ಸ್ಯಾಂಟ್ರೋ ಕಾರು ಇದಾಗಿದ್ದು, ನಗರದ ಪಿಕಳೆ ರಸ್ತೆಯಲ್ಲಿ ತಂದು ನಿಲ್ಲಿಸಿದಾಗ ಬ್ಯಾನೆಟ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ತಕ್ಷಣ ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಲಾಯಿತು. ಸ್ಥಳಕ್ಕಾಗಮಿಸಿದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಕಾರಿನ ಬ್ಯಾಟರಿಯಲ್ಲಿ ಅಧಿಕ ಹೀಟ್‌ನಿಂದ ಶಾರ್ಟ್ ಸರ್ಕ್ಯೂಟ್ ಆಗಿದ್ದು, ಕಾರವಾರ ನಗರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share This Article