ಕಾರು, ಲಾರಿ ನಡುವೆ ಡಿಕ್ಕಿ- ಒಂದೇ ಕುಟುಂಬದ ಮೂವರು ಸಾವು

Public TV
1 Min Read

ತುಮಕೂರು: ಕಾರು ಮತ್ತು ಲಾರಿ ನಡುವೆ ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರು ದುರ್ಮರಣ ಹೊಂದಿರುವ ಘಟನೆ ಕುಣಿಗಲ್ ತಾಲೂಕಿನ ಬೀಸೆಗೌಡನದೊಡ್ಡಿಯಲ್ಲಿ ನಡೆದಿದೆ.

car

ಮೃತರು ಚನ್ನಪಟ್ಟಣ ಮೂಲದವರಾಗಿದ್ದು, ಶಾಮಿಯ ಮೊಹಲ್ಲಾದ ಸೈಯದ್ ಮಹಮ್ಮದ್ ನಜ್ಮಿ (45), ಪತ್ನಿ ನಾಜೀಯಾ (35) ಹಾಗೂ ಕುಂದನ್ ಅಸೀ (1) ಮೃತ ದುರ್ದೈವಿಗಳು. ಇನ್ನೊಂದು ಮಗು 3 ವರ್ಷದ ಸೈಯದ್ ಕುಂದನ್ ನಬೀ ತೀವ್ರವಾಗಿ ಗಾಯಗೊಂಡಿದ್ದು, ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದೆ. ಇದನ್ನೂ ಓದಿ: ಸೀಬೆ ಹಣ್ಣು ಕೀಳಲು ಹೋಗಿ ಪ್ರಾಣ ಕಳೆದುಕೊಂಡ ಸಹೋದರಿಯರು

ಘಟನೆಯು ಹುಲಿಯೂರುದುರ್ಗ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇದನ್ನೂ ಓದಿ: 5 ದಿನವಾದ್ರೂ ಸಿಗದ ಆ್ಯಸಿಡ್ ನಾಗನ ಸುಳಿವು- ಪಾಗಲ್ ಪ್ರೇಮಿಯ ಪ್ರೀಪ್ಲ್ಯಾನ್ ಕೇಳಿ ಪೊಲೀಸ್ರೇ ಶಾಕ್

Share This Article
Leave a Comment

Leave a Reply

Your email address will not be published. Required fields are marked *