-2 ಮರಗಳ ನಡುವೆ ಕಾರು ಜಖಂ
ಕಾರವಾರ: ಅತೀ ವೇಗದ ಚಾಲನೆಯಿಂದ ಕಾರೊಂದು (Car) ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ಓರ್ವ ಗಂಭೀರ ಗಾಯಗೊಂಡ ಘಟನೆ ಉತ್ತರ ಕನ್ನಡ (Uttara Kannada) ಜಿಲ್ಲೆಯ ದಾಂಡೇಲಿ (Dandeli) ತಾಲೂಕಿನ ಕರ್ಕಾ ಕ್ರಾಸ್ನ ಅಜಗಾಂವ ಬಳಿ ನಡೆದಿದೆ.
ಧಾರವಾಡದ ಫಾರೂಖ್ ಸಾಬ್ ಮತ್ತು ಹಳಿಯಾಳದ ಮುದಸ್ಸಿರ್ ಇಸ್ಮಾಯಿಲ್ ಮುಲ್ಲಾ ಮೃತ ದುರ್ದೈವಿಗಳು. ಸದ್ಯ ಮೃತದೇಹಗಳನ್ನು ಹಳಿಯಾಳ ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಇದನ್ನೂ ಓದಿ: ಮಗಳ ಚಿಕಿತ್ಸಾ ವೆಚ್ಚ ಭರಿಸಲಾಗದೇ ಕಿಡ್ನಿ ಮಾರಾಟಕ್ಕೆ ಮುಂದಾದ ತಂದೆ – ನೊಂದ ಕುಟುಂಬಕ್ಕೆ ಶಾಸಕ ಸುರೇಶ್ ಕುಮಾರ್ ನೆರವು
ದಾಂಡೇಲಿಯಿಂದ ಹಳಿಯಾಳಕ್ಕೆ ಹೋಗುವಾಗ ಈ ಘಟನೆ ನಡೆದಿದ್ದು, ಡಿಕ್ಕಿಯ ರಭಸಕ್ಕೆ ಕಾರು ಎರಡು ಮರಗಳ ನಡುವೆ ಸಿಲುಕಿಕೊಂಡಿದೆ. ಘಟನೆ ಸಂಬಂಧ ದಾಂಡೇಲಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಬೆಳೆದ ಆರೋಪಿ ಬಂಧನ

