ಉಡುಪಿ: ಧಾರಾಕಾರ ಮಳೆಯ (Rain) ಪರಿಣಾಮ ಆಗುಂಬೆ ಘಾಟಿಯಲ್ಲಿ (Agumbe Ghat) ಕಾರೊಂದು (Car) ಪಲ್ಟಿಯಾಗಿದೆ.
ಆಗುಂಬೆಯಿಂದ ಉಡುಪಿ ಕಡೆಗೆ ಕಾರು ತೆರಳುತ್ತಿತ್ತು. ಈ ವೇಳೆ ಧಾರಾಕಾರ ಮಳೆಯಿಂದಾಗಿ 6 ನೇ ತಿರುವಿನಲ್ಲಿ ಕಾರು ಉರುಳಿ ಬಿದ್ದಿದೆ. ಕಾರಿನಲ್ಲಿದ್ದವರು ಅದೃಷ್ಟವಶಾತ್ ಪಾರಾಗಿದ್ದಾರೆ. ಇದನ್ನೂ ಓದಿ: ಮಂಗಳೂರಿನಲ್ಲಿ ʻಮರಣ ಮಳೆʼಗೆ ಅಜ್ಜಿ, ಮೊಮ್ಮಕ್ಕಳು ಬಲಿ – 9 ಗಂಟೆಗಳ ಜೀವನ್ಮರಣ ಹೋರಾಟದ ನಂತ್ರ ಬದುಕುಳಿದ ತಾಯಿ!
ಕಾರಿನಲ್ಲಿ ಸಿಲುಕಿಕೊಂಡಿದ್ದ ತಾಯಿ ಹಾಗೂ ಮಗುವನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಧಾರಾಕಾರವಾಗಿ ಸುರಿದ ಮಳೆಯಿಂದಾಗಿ ಚಾಲಕನ ನಿಯಂತ್ರಣ ತಪ್ಪಿ ಈ ಅಪಘಾತವಾಗಿದೆ.
ಹೆಬ್ರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇದನ್ನೂ ಓದಿ: ದಕ್ಷಿಣ ಕನ್ನಡದಲ್ಲಿ ಗುಡ್ಡ ಕುಸಿತ, ಪ್ರಾಣಹಾನಿ – ರಕ್ಷಣಾ ಕಾರ್ಯಕ್ಕೆ ಯು.ಟಿ ಖಾದರ್ ಸೂಚನೆ