`ರೆಟ್ರೋ’ ಪ್ರೀ-ರಿಲೀಸ್ ಈವೆಂಟ್‌ನಲ್ಲಿ ಆಕ್ಷೇಪಾರ್ಹ ಹೇಳಿಕೆ – ವಿಜಯ್ ದೇವರಕೊಂಡ ವಿರುದ್ಧ ಕೇಸ್ ದಾಖಲು

Public TV
2 Min Read

`ರೆಟ್ರೋ’ (Retro) ಪ್ರೀ-ರಿಲೀಸ್ (Pre-Release Event) ಈವೆಂಟ್‌ನಲ್ಲಿ ಬುಡಕಟ್ಟು ಸಮುದಾಯದ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ್ದಕ್ಕಾಗಿ ತೆಲುಗು ನಟ ವಿಜಯ್ ದೇವರಕೊಂಡ (Vijay Devarakonda) ವಿರುದ್ಧ ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಮೇ 1ರಂದು ತೆರೆಕಂಡಿರುವ `ರೆಟ್ರೋ’ ಸಿನಿಮಾದಲ್ಲಿ ತಮಿಳು ನಟ ಸೂರ್ಯ ಹಾಗೂ ನಟಿ ಪೂಜಾ ಹೆಗ್ಡೆ ನಟಿಸಿದ್ದಾರೆ. ಸಿನಿಮಾ ರಿಲೀಸ್‌ಗೂ ಮುನ್ನ ಏ.26ರಂದು ಹೈದರಾಬಾದ್‌ನ ಜೆಆರ್‌ಸಿ ಕನ್‌ವೆನ್ಷನ್‌ನಲ್ಲಿ ತೆಲುಗು `ರೆಟ್ರೋ’ ಸಿನಿಮಾದ ಪ್ರೀ-ರಿಲೀಸ್ ಈವೆಂಟ್ ಆಯೋಜಿಸಲಾಗಿತ್ತು.ಇದನ್ನೂ ಓದಿ: ಜಯಂ ರವಿ ಜೊತೆ ಬೋಲ್ಡ್ ಆಗಿ ಕಾಣಿಸ್ಕೊಂಡ ವದಂತಿ ಗೆಳತಿ ಕೆನೀಶಾ

ಕಾರ್ಯಕ್ರಮದಲ್ಲಿ ತೆಲುಗು ನಟ ವಿಜಯ್ ದೇವರಕೊಂಡ ಅವರು ಭಾಗಿಯಾಗಿದ್ದರು. ಈ ವೇಳೆ ಕಾಶ್ಮೀರದಲ್ಲಿ ನಡೆದ ಪಹಲ್ಗಾಮ್ ದಾಳಿಯನ್ನು ಉಲ್ಲೇಖಿಸಿ ಮಾತನಾಡಿದ್ದ ವಿಜಯ್, ಈ ರೀತಿಯ ಘಟನೆಗಳಿಗೆ ಪರಿಹಾರವೆಂದರೆ ಭಯೋತ್ಪಾದಕರಿಗೆ ಶಿಕ್ಷಣ ನೀಡುವುದು. ಅಂದರೆ ಭಯೋತ್ಪಾದಕರಾಗದಂತೆ ತಡೆಯುವುದು. ಭಯೋತ್ಪಾದನೆಯಿಂದ ಅವರಿಗೆ ಏನು ಲಾಭ? ಕಾಶ್ಮೀರ ಭಾರತಕ್ಕೆ ಸೇರಿದ್ದು, ಕಾಶ್ಮೀರಿಗಳು ನಮ್ಮವರು. ಇನ್ನೂ ಪಾಕಿಸ್ತಾನದ ಮೇಲೆ ಭಾರತ ದಾಳಿ ಮಾಡುವ ಅವಶ್ಯಕತೆಯಿಲ್ಲ. ಈಗಾಗಲೇ ಪಾಕಿಸ್ತಾನದವರು ತಮ್ಮ ಸರ್ಕಾರದಿಂದಾಗಿ ಕಿತ್ತು ತಿನ್ನುವ ಪರಿಸ್ಥಿತಿಗೆ ಬಂದಿದ್ದಾರೆ. ಇದು ಹೀಗೆ ಮುಂದುವರಿದರೆ ಪಾಕಿಸ್ತಾನದ ಪ್ರಜೆಗಳೇ ತಮ್ಮ ಸರ್ಕಾರದ ಮೇಲೆ ದಾಳಿ ನಡೆಸುತ್ತಾರೆ. 500 ವರ್ಷಗಳ ಹಿಂದೆ ಸಾಮಾನ್ಯ ಜ್ಞಾನವಿಲ್ಲದೆ ಬುಡಕಟ್ಟು ಜನಾಂಗದವರು ಹೋರಾಡಿದಂತೆ ಇದೀಗ ಭಯೋತ್ಪಾದಕರು ವರ್ತಿಸುತ್ತಿದ್ದಾರೆ ಎಂದು ಹೇಳಿದರು.

ಈ ಹೇಳಿಕೆಯಿಂದಾಗಿ ಬುಡಕಟ್ಟು ಸಮುದಾಯದವರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ಬಳಿಕ ಇದನ್ನರಿತ ವಿಜಯ್ ಕ್ಷಮೆಯಾಚಿಸಿದ್ದರು. ನಾನು ಯಾವುದೇ ಸಮುದಾಯವನ್ನು ಗುರಿಯಾಗಿಸಿಕೊಂಡು ಈ ಹೇಳಿಕೆ ನೀಡಿಲ್ಲ. ಯಾರನ್ನೂ ನೋವಿಸುವ ಉದ್ದೇಶ ನನ್ನದಾಗಿರಲಿಲ್ಲ. ನಾನು ಎಲ್ಲರನ್ನು ಗೌರವಿಸುತ್ತೇವೆ ಎಂದು ಹೇಳಿದ್ದರು.

ಸದ್ಯ ಸೈದಾಬಾದ್ ನಿವಾಸಿ ಮತ್ತು ಬುಡಕಟ್ಟು ಸಮುದಾಯಗಳ ಜಂಟಿ ಕ್ರಿಯಾ ಸಮಿತಿಯ ರಾಜ್ಯ ಅಧ್ಯಕ್ಷ ನೆನವತ್ ಅಶೋಕ್ ಕುಮಾರ್ ನಾಯಕ್ ಅವರು ನಟ ವಿಜಯ್ ದೇವರಕೊಂಡ ಅವರ ವಿರುದ್ಧ ದೂರು ದಾಖಲಿಸಿದ್ದಾರೆ. ನಟ ವಿಜಯ್ ಹೇಳಿಕೆ ನೀಡಿದ ಒಂದು ತಿಂಗಳ ನಂತರ ಸೈಬರಾಬಾದ್‌ನ ರಾಯದುರ್ಗ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಇದಕ್ಕೂ ಮುನ್ನ ಹೈದರಾಬಾದ್ ಮೂಲದ ವಕೀಲ ಲಾಲ್ ಚೌಹಾಣ್ ನಟನ ವಿರುದ್ಧ ದೂರು ದಾಖಲಿಸಿದ್ದರು. ಸದ್ಯ ವಿಜಯ್ ದೇವರಕೊಂಡ `ಕಿಂಗ್ಡಮ್’ ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ.ಇದನ್ನೂ ಓದಿ: ಮಾಜಿ ಪ್ರಧಾನಿ ದೇವೇಗೌಡರಿಗೆ ‘ಶ್ರೀ ಗಂಗ ಸಾಮ್ರಾಟ ಶ್ರೀ ಪುರುಷ’ ಪ್ರಶಸ್ತಿ ಪ್ರದಾನ

Share This Article