ಅತ್ಯಾಚಾರಕ್ಕೆ ಯತ್ನಿಸಿ ಮಹಿಳೆಗೆ ಬೆಂಕಿ ಹಚ್ಚಿದ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ

Public TV
2 Min Read

ಕೊಪ್ಪಳ: ಲೈಂಗಿಕ ಕ್ರಿಯೆಗೆ ಸಹಕರಿಸದ ಮಹಿಳೆಯ ಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿ ಸಾಯಿಸಿದ ಆರೋಪಿಗೆ ಜಿಲ್ಲಾ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.

ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದ ಒಂದನೇ ಹೆಚ್ಚುವರಿ ಸತ್ರ ಮತ್ತು ಜಿಲ್ಲಾ ನ್ಯಾಯಾಧೀಶ ಎಂ.ಜಿ.ಶಿವಳ್ಳಿಯವರು ಕಲಂ 448 ಅನ್ವಯ ಒಂದು ವರ್ಷ ಜೈಲು ಶಿಕ್ಷೆ ಒಂದು ಸಾವಿರ ರೂ. ದಂಡ ಹಾಗೂ 302 ಕಲಂ ಅನ್ವಯ ಜೀವಾವಧಿ ಶಿಕ್ಷೆ, 10 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

ನಡೆದಿದ್ದೇನು?
ಗಂಗಾವತಿ ತಾಲೂಕಿನ ಸಂಗಾಪೂರ ಗ್ರಾಮದಲ್ಲಿ 2015ರ ಜುಲೈ 27 ರಂದು ವಿಧವೆಯೊರ್ವಳು ತನ್ನ ಚಿಕ್ಕ ಮಗನ ಜೊತೆ ವಾಸವಿದ್ದಳು. ಆ ಸಮಯದಲ್ಲಿ ಸಂಗಾಪೂರ ಗ್ರಾಮದ ಬಾಲಪ್ಪ ತಂದೆ ಗೋವಿಂದಪ್ಪ ವಿಧವೆಯ ಮನೆಗೆ ತೆರಳಿ ಲೈಂಗಿಕ ಕ್ರಿಯೆಗೆ ಕರೆದಿದ್ದಾನೆ. ಆಗ ಆಕೆ ನಿರಾಕರಿಸಿ ಕೂಗಾಡಿದ್ದರಿಂದ ಸೀಮೆ ಎಣ್ಣೆಯನ್ನು ಸುರಿದು ಬೆಂಕಿ ಹಚ್ಚಿದ್ದಾನೆ. ಇದನ್ನೂ ಓದಿ: ನಿದ್ದೆಯಿಂದ ಎಬ್ಬಿಸಿದಕ್ಕೆ ಪೊಲೀಸರನ್ನ ಅಸಭ್ಯವಾಗಿ ನಿಂದಿಸಿದ ವ್ಯಕ್ತಿಗೆ 1 ವರ್ಷ 7  ತಿಂಗಳು ಜೈಲು 

ಇದರಿಂದ ಮಹಿಳೆ ಗಂಭೀರ ಗಾಯಗೊಂಡಿದ್ದು, ಗಂಗಾವತಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿಂದ ಆಕೆಯನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಿದರೂ ಫಲಕಾರಿಯಾಗದೇ, 2015 ಆ 01 ರಂದು ಮಹಿಳೆ ಮೃತಪಟ್ಟಿದ್ದಳು.

ಗ್ರಾಮೀಣ ಪೊಲೀಸ್ ಠಾಣೆಯ ಅಂದಿನ ಸಿಪಿಐ ಆಗಿದ್ದ ಪ್ರಭಾಕರ್ ಧರ್ಮಟ್ಟಿ ಪ್ರಕರಣದ ತನಿಖೆ ನಡೆಸಿ ದೋಷಾರೋಪಣ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ವಿಚಾರಣೆಯ ಸಂದರ್ಭದಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷ್ಯಧಾರರ ಸಾಕ್ಷ್ಯ ಮತ್ತು ದಾಖಲೆಗಳನ್ನು ಪರಿಶೀಲಿಸಿ ಒಂದನೇಯ ಹೆಚ್ಚುವರಿ ಸತ್ರ ಮತ್ತು ಜಿಲ್ಲಾ ನ್ಯಾಯಾಧೀಶ ಎಂ.ಜಿ.ಶಿವಳ್ಳಿ ಅವರು ಕಲಂ 448 ಅನ್ವಯ ಒಂದು ವರ್ಷ ಜೈಲು ಶಿಕ್ಷೆ, ಒಂದು ಸಾವಿರ ರೂ. ದಂಡ ಹಾಗೂ 302 ಕಲಂ ಅನ್ವಯ ಜೀವಾವಧಿ ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

ಜೊತೆಗೆ ಮಹಿಳೆಯ ಸಾವಿಗೆ ಪರಿಹಾರಕ್ಕಾಗಿ ಕೊಪ್ಪಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಪರಿಹಾರಕ್ಕಾಗಿ ಅರ್ಜಿ ಸಲ್ಲಿಸುವಂತೆ ಮೃತಳ ಪುತ್ರನಿಗೆ ಸೂಚನೆ ನೀಡಿದ್ದಾರೆ. ಅಭಿಯೋಜನಾ ಪರವಾಗಿ ಸರ್ಕಾರಿ ಅಭಿಯೋಜಕಿ ನಾಗಲಕ್ಷ್ಮಿ.ಎಸ್ ವಾದ ಮಂಡಿಸಿದ್ದರು.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *