ಕಲುಷಿತ ನೀರಿಗೆ ಮೂವರು ಬಲಿ ಪ್ರಕರಣ – ಲೋಕಾಯುಕ್ತದಲ್ಲಿ ಸ್ವಯಂ ಪ್ರೇರಿತ ದೂರು ದಾಖಲು

Public TV
1 Min Read

ಯಾದಗಿರಿ: ಜಿಲ್ಲೆಯ ಗುರುಮಿಠಕಲ್ ತಾಲೂಕಿನ ಅನಪುರ ಗ್ರಾಮದಲ್ಲಿ ಕಲುಷಿತ ನೀರು (Polluted Water) ಸೇವಿಸಿ ಮೂವರು ಮೃತಪಟ್ಟು, ನೂರಾರು ಜನರು ಅಸ್ವಸ್ಥಗೊಂಡ ಘಟನೆಗೆ ಸಂಬಂಧಿಸಿದಂತೆ ಲೋಕಾಯುಕ್ತದಲ್ಲಿ (Lokayukta) ಸ್ವಯಂ ಪ್ರೇರಿತ ದೂರು ದಾಖಲಾಗಿದೆ.

ಲೋಕಾಯುಕ್ತ ನ್ಯಾಯಮೂರ್ತಿ ಬಿಎಸ್ ಪಾಟೀಲ್ ಅವರು ದೂರು ದಾಖಲಿಸಿಕೊಂಡಿದ್ದು, ತನಿಖೆ ನಡೆಸಿ ವರದಿ ನೀಡುವಂತೆ ಆದೇಶಿಸಿದ್ದಾರೆ. ದೂರು ದಾಖಲಾಗುತ್ತಿದ್ದಂತೆ ಎಚ್ಚರಗೊಂಡಿರುವ ಅಧಿಕಾರಿಗಳು ತನಿಖೆಯನ್ನೂ ಆರಂಭಿಸಿದ್ದಾರೆ.

ಫೆಬ್ರವರಿ 14 ರಂದು ಕಾಣಿಸಿಕೊಂಡ ವಾಂತಿ-ಭೇದಿ ಪ್ರಕರಣದಿಂದ ಸಾವಿತ್ರಮ್ಮ (35), ಸಾಯಮ್ಮ (70) ಹಾಗೂ ನರಸಮ್ಮ (73) ಮೃತಪಟ್ಟಿದ್ದರು. ನಿರ್ಜಲೀಕರಣಕ್ಕೆ ಒಳಗಾಗಿ ನೂರಾರು ಜನರು ಅಸ್ವಸ್ಥಗೊಂಡು ಯಾದಗಿರಿ, ರಾಯಚೂರು ಹಾಗೂ ಆಂಧ್ರ ಪ್ರದೇಶದ ನಾರಾಯಣಪೇಟೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ದಾಖಲಾಗಿದ್ದರು. ಇದನ್ನೂ ಓದಿ: ಆಂಧ್ರ ಸಿಎಂ ಸಹೋದರಿ ಅರೆಸ್ಟ್; ಎಸ್ಸಿ-ಎಸ್ಟಿ ದೌರ್ಜನ್ಯ ತಡೆ ಕೇಸ್ ದಾಖಲು

ಸದ್ಯ ವಾಂತಿ-ಭೇದಿ ಪ್ರಕರಣಗಳು ಕಡಿಮೆಯಾಗಿದ್ದು, ಆಸ್ಪತ್ರೆಗೆ ದಾಖಲಾದವರು ಒಬ್ಬೊಬ್ಬರಾಗಿಯೇ ಡಿಸ್ಚಾರ್ಜ್ ಆಗುತ್ತಿದ್ದಾರೆ. ಗ್ರಾಮದ 11 ಕಡೆಗಳಲ್ಲಿ ಸಂಗ್ರಹಿಸಿ ತಪಾಸಣೆ ಮಾಡಿದ ನೀರಿನ ವರದಿ ಈಗಾಗಲೇ ಬಂದಿದ್ದು, ಬರೋಬ್ಬರಿ 4 ಕಡೆಗಳಲ್ಲಿನ ನೀರು ಕುಡಿಯಲು ಯೋಗ್ಯವಾಗಿಲ್ಲ ಎನ್ನುವ ಆಘಾತಕಾರಿ ಅಂಶವೂ ಬಯಲಾಗಿದೆ. ಗ್ರಾಮದಲ್ಲಿ ಕಲುಷಿತ ನೀರಿನ ಪ್ರಕರಣಕ್ಕೆ ಗ್ರಾಮ ಪಂಚಾಯಿತಿ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎನ್ನಲಾಗುತ್ತಿದೆ. ಇದೀಗ ಎಲ್ಲಾ ಆಯಾಮಗಳಲ್ಲೂ ತನಿಖೆ ಆರಂಭವಾಗಿದೆ. ಇದನ್ನೂ ಓದಿ: ಕ್ರಿಕೆಟ್ ಟೂರ್ನಿ ವೇಳೆ ಕಿರಿಕ್ ಮಾಡಿ ಇಬ್ಬರ ಹತ್ಯೆ ಪ್ರಕರಣ – ಆರೋಪಿತರ ಕಾಲಿಗೆ ಪೊಲೀಸರ ಗುಂಡೇಟು

LIVE TV
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
1 Comment

Leave a Reply

Your email address will not be published. Required fields are marked *