ಇನ್ಸ್‌ಪೆಕ್ಟರ್‌ ನಂದೀಶ್ ತೆಗೆದುಕೊಂಡ ತೀರ್ಮಾನ ರಾಂಗ್ – ತಮ್ಮ ಹೇಳಿಕೆ ಸಮರ್ಥಿಸಿಕೊಂಡ ಎಂಟಿಬಿ

Public TV
1 Min Read

ರಾಯಚೂರು: ಇನ್ಸ್‌ಪೆಕ್ಟರ್‌ ನಂದೀಶ್ (Inspector Nandish) ಸಾವು ಪ್ರಕರಣ ಹಿನ್ನೆಲೆ ಪೋಸ್ಟಿಂಗ್‍ಗೆ 70-80 ಲಕ್ಷ ಹಣ ಕೊಟ್ಟು ಬಂದರೆ ಹೃದಯಾಘಾತ ಆಗದೆ ಇನ್ನೇನಾಗುತ್ತೆ ಎಂದು ಹೇಳಿಕೆ ನೀಡುವ ಮೂಲಕ ವಿವಾದ ಸೃಷ್ಟಿಸಿದ್ಧ ಪೌರಾಡಳಿತ ಸಚಿವ ಎಂಟಿಬಿ ನಾಗರಾಜ್ (M.T.B Nagaraj) ತಮ್ಮ ಹೇಳಿಕೆಯನ್ನು ಮತ್ತೊಮ್ಮೆ ಸಮರ್ಥಿಸಿಕೊಂಡಿದ್ದಾರೆ. ಆತ ತೆಗೆದುಕೊಂಡ ತೀರ್ಮಾನ ರಾಂಗ್, ಸಣ್ಣ ವಿಷಯಕ್ಕೆ ಕಮಿಷನರ್ ಸಸ್ಪೆಂಡ್ ಮಾಡಿದ್ದು ತಪ್ಪು. ಹೆಂಡತಿ ಮಕ್ಕಳು ಇದ್ದಾರೆ. ಆ ಕಮಿಷನರ್ ಕೆಟ್ಟ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದಿದ್ದಾರೆ.

ರಾಯಚೂರಿನಲ್ಲಿ ಕನಕದಾಸ ಪುತ್ಥಳಿ ಅನಾವರಣ ಕಾರ್ಯಕ್ರಮಕ್ಕೆ ಆಗಮಿಸಿದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಾವಿನ ಬಳಿಕ ನಾನು ನೋಡಲು ಹೋಗುವಾಗ ಹಿಂದೆ ಕಾರ್ಯಕರ್ತರು ಬರುತ್ತಿದ್ದರು. ಯಾಕೆ ಇಂತಹ ತೀರ್ಮಾನ ತಗೊಂಡ ಅಂತ ಹೇಳುತ್ತಾ ಬರುತ್ತಿದ್ದರು. 70-80 ಲಕ್ಷ ಖರ್ಚು ಮಾಡಿಬಿಟ್ಟೆ ಅಂತ ಟೆನ್ಷನ್‍ನಲ್ಲಿ ಇದ್ದೆ ಅಂತ ಹೇಳ್ತಿದ್ನಂತೆ. ಇಲ್ಲಿ ಏನ್ ಮಾಡಬೇಕು ಅಂತ ಖರ್ಚು ಮಾಡ್ದ, ಅಂತ ಹೇಳ್ದೆ ಅಷ್ಟೇ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಇನ್ಸ್‌ಪೆಕ್ಟರ್‌ ನಂದೀಶ್ ಸಾವಿಗೆ ಪೋಸ್ಟಿಂಗ್ ಲಂಚ ಕಾರಣನಾ? – ಸಂಚಲನ ಮೂಡಿಸಿದ ಎಂಟಿಬಿ ಮಾತು

ಆತ ತೆಗೆದುಕೊಂಡ ತೀರ್ಮಾನ ರಾಂಗ್, ಸಣ್ಣ ವಿಷಯಕ್ಕೆ ಕಮಿಷನರ್ ಸಸ್ಪೆಂಡ್ ಮಾಡಿದ್ದು ತಪ್ಪು. ಹೆಂಡತಿ ಮಕ್ಕಳು ಇದ್ದಾರೆ. ಆ ಕಮಿಷನರ್ ಕೆಟ್ಟ ನಿರ್ಧಾರ ತೆಗೆದುಕೊಂಡಿದ್ದಾರೆ. ನಾವು ಮುಖ್ಯಮಂತ್ರಿಗಳ ಬಳಿ ಮಾತನಾಡಿ ಪರಿಹಾರ ಕೊಡಿಸುತ್ತೇವೆ. ಆ ಮಹಿಳೆಗೆ ಉದ್ಯೋಗವನ್ನು ಕೊಡಿಸುತ್ತೇವೆ. ನಿನ್ನೆ ಮುಖ್ಯಮಂತ್ರಿಗಳ ಬಳಿ ನಾನು ಮಾತನಾಡಿದ್ದೇನೆ. ಅವರು ಒಪ್ಪಿದ್ದಾರೆ. ಅನ್ಯಾಯ ಆಗಿದೆ ಅದನ್ನು ಸರಿಪಡಿಸೋಣ ಅಂತ ಸಿಎಂ (CM) ಹೇಳಿದ್ದಾರೆ. ನಾವು ಸರಿಪಡಿಸುತ್ತೇವೆ ಎಂದು ಭರವಸೆ ನೀಡಿದ್ದಾರೆ. ಇದನ್ನೂ ಓದಿ: ಆಹ್ವಾನ ಪತ್ರಿಕೆಯಲ್ಲಿ ಸಿದ್ದರಾಮಯ್ಯ ಹೆಸರು ಮಾಯ – ಸಚಿವರಿದ್ದ ವೇದಿಕೆ ಏರಿ ಅಭಿಮಾನಿಗಳಿಂದ ಗಲಾಟೆ

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *