ಕಾರವಾರ: ಭಟ್ಕಳ ಅರಣ್ಯದಲ್ಲಿ ಗೋವುಗಳ ರಾಶಿ ರಾಶಿ ಮೂಳೆಗಳು ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಟ್ಕಳ ಶಹರ ಠಾಣೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಭಟ್ಕಳದ ಚೌಥನಿ ಕಾಲೊನಿಯ ಮೊಹ್ಮದ್ ರಾಯನ್ ಅಲಿಯಾಸ್ ಮಹ್ಮದ್ ರಿಜ್ವಾನ್, ಮಗ್ದೂಂ ಕಾಲೊನಿಯ ಮಹ್ಮದ್ ಸಂವನ್ ಬಂಧಿತ ಆರೋಪಿಗಳು. ಇಬ್ಬರೂ ಗೋವುಗಳನ್ನು ಕಳ್ಳತನ ಮಾಡಿ ಭಟ್ಕಳಕ್ಕೆ ತಂದು ಮಾಂಸ ಬೇರ್ಪಡಿಸಿ ನಂತರ ಮಗ್ದೂ ಕಾಲೊನಿ ಸಮೀಪದ ಅರಣ್ಯದಲ್ಲಿ ಸುರಿಯುತ್ತಿದ್ದರು.
ಮಗ್ದೂಂ ಕಾಲೊನಿ ಬಳಿಯ ಬೆಳ್ನೆ ಗ್ರಾಮದ ಸರ್ವೆ ನಂಬರ್ 74 ರ ಅರಣ್ಯ ಭಾಗದಲ್ಲಿ ದೊಡ್ಡಮಟ್ಟದ ಗೋವುಗಳ ಮೂಳೆಗಳ ರಾಶಿ ಪತ್ತೆಯಾಗಿತ್ತು. ಈ ಕುರಿತು ಅರಣ್ಯ ಇಲಾಖೆ ಅಧಿಕಾರಿಗಳು ದೂರು ನೀಡಿದ್ದರು. ದೂರು ದಾಖಲಿಸಿ ಎರಡು ತಂಡ ರಚಿಸಿ ತನಿಖೆ ನಡೆಸಲಾಗಿತ್ತು. ಭಟ್ಕಳ ಶಹರ ಠಾಣೆ ಸಿಪಿಐ ದಿವಾಕರ್ ನೇತೃತ್ವದಲ್ಲಿ ಪಿಎಸ್ಐ ನವೀನ್ ಅವರ ತಂಡದಿಂದ ಕಾರ್ಯಾಚರಣೆ ನಡೆಸಲಾಗಿತ್ತು.